ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm