ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm