ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm