ಬ್ರೇಕಿಂಗ್ ನ್ಯೂಸ್
17-08-21 10:52 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಡೀ ರಾಜ್ಯದಲ್ಲೇ ಹೆಚ್ಚಿರುವುದು ಆತಂಕಕ್ಕೆ ಕಾರಣವಾಗಿರುವಾಗಲೇ ಆರೋಗ್ಯ ಇಲಾಖೆಯಿಂದ ಹೊಸತೊಂದು ಸುದ್ದಿ ಹೊರಬಿದ್ದಿದೆ. ಕೇರಳದಿಂದ ನೆಗೆಟಿವ್ ರಿಪೋರ್ಟ್ ತೋರಿಸಿ ಬಂದ ವಿದ್ಯಾರ್ಥಿಗಳೇ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಆಗುತ್ತಿದ್ದಾರೆ.
ಇಲಾಖೆಯ ಮಾಹಿತಿ ಪ್ರಕಾರ, ಕಳೆದ ಹತ್ತು ದಿನಗಳಲ್ಲಿ ಕೇರಳದಿಂದ 390 ಮಂದಿ ವಿದ್ಯಾರ್ಥಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಕೋವಿಡ್ ನೆಗೆಟಿವ್ ವರದಿ ತೋರಿಸಿಕೊಂಡೇ ಕರ್ನಾಟಕ ಪ್ರವೇಶ ಮಾಡಿದ್ದ ಈ ವಿದ್ಯಾರ್ಥಿಗಳನ್ನು ಮಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಅಂದರೆ, ತಾವು ಉಳಿದುಕೊಳ್ಳುವ ಆಯಾ ಕೇಂದ್ರಗಳಲ್ಲೇ ಐಸೋಲೇಶನ್ ಇರುವಂತೆ ಸೂಚಿಸಿ, ಹೊರಗೆ ಅಡ್ಡಾಡದಂತೆ ಉಳಿದುಕೊಳ್ಳುವಂತೆ ಸೂಚಿಸಲಾಗಿತ್ತು.
ಅದರಂತೆ, ಏಳು ದಿನಗಳ ಬಳಿಕ ಹೀಗೆ ಉಳಿದುಕೊಂಡ ವಿದ್ಯಾರ್ಥಿಗಳನ್ನು ಆರೋಗ್ಯ ಇಲಾಖೆಯ ಸಿಬಂದಿ ಪರೀಕ್ಷೆ ಮಾಡಿದ್ದು ಸ್ವತಃ ಅಚ್ಚರಿಗೆ ಒಳಗಾಗಿದ್ದಾರೆ. ಪರೀಕ್ಷೆ ವೇಳೆ ಅತಿ ಹೆಚ್ಚು ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆ. ಒಟ್ಟು 229 ವಿದ್ಯಾರ್ಥಿಗಳು ಪಾಸಿಟಿವ್ ಆಗಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಒಂದ್ಕಡೆ ವಿದ್ಯಾರ್ಥಿಗಳು ಹಿಡಿದುಕೊಂಡು ಬಂದ ಕೋವಿಡ್ ನೆಗೆಟಿವ್ ರಿಪೋರ್ಟ್ ಬಗ್ಗೆಯೇ ಸಂಶಯ ವ್ಯಕ್ತವಾಗಿದೆ. ಅಲ್ಲದೆ, ಹೀಗೆ ಬಂದು ಉಳಿದುಕೊಂಡ ಹಾಸ್ಟೆಲ್ ಇನ್ನಿತರ ಪ್ರದೇಶಗಳಲ್ಲಿ ಇತರರಿಗೂ ಕೋವಿಡ್ ಹರಡುವ ಆತಂಕ ಉಂಟಾಗಿದೆ.
ಕೇರಳದ ವಿದ್ಯಾರ್ಥಿಗಳನ್ನು ಕೋವಿಡ್ ನೆಗೆಟಿವ್ ವರದಿ ಇದ್ದ ಕಾರಣಕ್ಕೆ ಒಳಗೆ ಬಿಡಲಾಗಿತ್ತು. ಗಡಿಭಾಗದಲ್ಲಿ ನಿರ್ಬಂಧ ವಿಧಿಸಿ ಕೋವಿಡ್ ಹರಡದಂತೆ ಹರಸಾಹಸ ಪಟ್ಟಿದ್ದು ಒಂದೆಡೆ ಆಗಿದ್ದರೆ, ಇದೇ ವೇಳೆ ನೆಗೆಟಿವ್ ಎಂದು ಹೇಳಿಕೊಂಡು ಬಂದಿದ್ದ ಮಂದಿಯೇ ಮಂಗಳೂರಿನಲ್ಲಿ ಕೋವಿಡ್ ಹರಡಲು ಮತ್ತು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದ್ದಾರೆ ಎನ್ನೋದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿದೆ.
Mangalore Among 390 students from Kerala 229 tested Covid Positive with Negative report
13-07-26 10:32 am
HK News Staffer
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 11:51 am
HK News Staffer
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm