ಬ್ರೇಕಿಂಗ್ ನ್ಯೂಸ್
19-08-21 10:42 am Mangaluru Correspondent ಕರಾವಳಿ
ಸುಬ್ರಹ್ಮಣ್ಯ, ಆಗಸ್ಟ್ 19: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ, ದೇವಸ್ಥಾನದಲ್ಲಿ ತೀರ್ಥಪ್ರಸಾದ, ಅನ್ನಸಂತರ್ಪಣೆಯೂ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ದೇವರ ದರ್ಶನಕ್ಕೆ ಕೂಡ ಅವಕಾಶ ನಿರ್ಬಂಧಿಸಲಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪ್ರಕಟಣೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಜಿಲ್ಲಾಧಿಕಾರಿಗಳು ಯಾವುದೇ ಸೇವೆ ನಡೆಸದಂತೆ ಸೂಚನೆ ನೀಡಿದ್ದರು. ಇದರಂತೆ, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆಯಲ್ಲಿ ಆ.30ರ ತನಕ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆ, ವಿಧಿಗಳು ನಡೆಯುವುದಿಲ್ಲ.

ಬೆಳಗ್ಗೆ 7ರಿಂದ ಮಧ್ಯಾಹ್ನ 11.30ರ ತನಕ, ಮಧ್ಯಾಹ್ನ 12-15- 1.30 ಹಾಗೂ 2.30 ರಿಂದ ಸಂಜೆ ಏಳರ ತನಕ ಭಕ್ತರು ದೇವರ ದರುಶನ ಮಾಡಬಹುದು. ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳಲ್ಲಿ ಕ್ಷೇತ್ರದ ವಸತಿ ಗೃಹದಲ್ಲಿ ತಂಗುವುದಕ್ಕೂ ಅವಕಾಶ ಇಲ್ಲ.
ಅಲ್ಲದೆ, ಇತರ ದಿನಗಳಲ್ಲಿ ಉಳಿದುಕೊಳ್ಳುವ ಭಕ್ತರು 72 ಗಂಟೆಯೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
Spike in Covid-19 cases kukke subramanya temple to close all its services till August 30th.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm