ಬ್ರೇಕಿಂಗ್ ನ್ಯೂಸ್
19-08-21 11:39 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈವಶವಾಗುತ್ತಿದ್ದಂತೆ ಅಲ್ಲಿರುವ ಸಾವಿರಾರು ಭಾರತೀಯರನ್ನು ವಾಯುಪಡೆ ಮೂಲಕ ಏರ್ ಲಿಫ್ಟ್ ಮಾಡಲಾಗುತ್ತಿದೆ. ಈ ನಡುವೆ, ಉಳ್ಳಾಲದ ಉಳಿಯ ನಿವಾಸಿಯೊಬ್ಬರು ಅಫ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮರಳಿ ಬಂದಿದ್ದಾರೆ.
ಮೆಲ್ವಿನ್ ಮೊಂತೇರೋ ವಾಯುಪಡೆ ವಿಮಾನದಲ್ಲಿ ಮರಳಿ ತಾಯ್ನಾಡಿಗೆ ಬಂದಿದ್ದಾರೆ. ಮೆಲ್ವಿನ್ ಕಾಬೂಲ್ ನಲ್ಲಿರುವ ನ್ಯಾಟೋ ಪಡೆಯ ಮಿಲಿಟರಿ ಬೇಸ್ ಕ್ಯಾಂಪ್ ಆಸ್ಪತ್ರೆಯಲ್ಲಿ ಇಲೆಕ್ಟ್ರಿಕಲ್ ಮೆಂಟೇನೆನ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಮೊನ್ನೆ ಕಾಬೂಲನ್ನು ಉಗ್ರರು ಮುತ್ತಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬುತ್ತಿದ್ದಂತೆ ಜನರು ಏರ್ಪೋರ್ಟ್ ಬಳಿ ಸೇರಿದ್ದರು. ಅಲ್ಲಿನ ನಿವಾಸಿಗಳೆಲ್ಲ ಏರ್ಪೋರ್ಟ್ ಒಳಗೆ ಸೇರಿದ್ದರಿಂದ ವಿಮಾನಗಳು ಇಳಿಯಲಾಗದೆ ಬರಲು ಕಷ್ಟವಾಗಿತ್ತು. ಆದರೂ ನಮ್ಮ ಸಂಸ್ಥೆಯವರು ಸಿಬಂದಿಯನ್ನು ಭಾರತಕ್ಕೆ ಏರ್ ಲಿಫ್ಟ್ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ತಿಳಿಸಿದ್ದಾರೆ.
ಈ ನಡುವೆ, ಭಾರತೀಯ ರಾಯಭಾರ ಕಚೇರಿಯಲ್ಲಿದ್ದ ಸಿಬಂದಿಯನ್ನು ಕರೆತರಲು ವಾಯುಸೇನೆಯ ವಿಮಾನದಲ್ಲಿ ನಮ್ಮ ಸಂಸ್ಥೆಯ ಏಳು ಮಂದಿ ಸೇರಿ ಒಟ್ಟು 160 ಮಂದಿಯನ್ನು ಮಂಗಳವಾರ ಬೆಳಗ್ಗೆ ಕರೆತಂದಿದ್ದಾರೆ. ಗುಜರಾತ್ ನಲ್ಲಿರುವ ಏರ್ ಬೇಸ್ ಕ್ಯಾಂಪ್ ಗೆ ತಂದು ಬಿಟ್ಟಿದ್ದರು. ಅಲ್ಲಿಂದ ಬೆಂಗಳೂರು ಮೂಲಕ ಸುರಕ್ಷಿತವಾಗಿ ಮನೆಗೆ ಮರಳಿದ್ದಾಗಿ ಮೆಲ್ವಿನ್ ಹೇಳಿದ್ದಾರೆ. ಇವರು ಇತ್ತೀಚೆಗಷ್ಟೇ ಪತ್ನಿಗೆ ಕೊರೊನಾ ತಗಲಿದೆ ಎಂದು ಊರಿಗೆ ಬಂದು ಹೋಗಿದ್ದರಂತೆ.



ಮೆಲ್ವಿನ್ ಮೊಂತೇರೊ ಅವರ ತಮ್ಮ ಡಮ್ಸಿ ಮೊಂತೇರೋ ಕೂಡ ಅಫ್ಘಾನಿಸ್ತಾನದಲ್ಲಿದ್ದು ಅಲ್ಲಿ ಏಸಿ ಮೆಕ್ಯಾನಿಕ್ ಆಗಿದ್ದಾರೆ. ಅವರನ್ನು ಕಾಬೂಲ್ ಏರ್ಪೋರ್ಟ್ ನಿಂದ ಕತಾರ್ ಗೆ ಏರ್ ಲಿಫ್ಟ್ ಮಾಡಲಾಗಿದೆ ಎನ್ನುವ ಮಾಹಿತಿ ದೊರಕಿದೆ ಎಂದು ಮೆಲ್ವಿನ್ ತಿಳಿಸಿದ್ದಾರೆ. ಡಮ್ಸಿ ಎರಡು ದಿನಗಳಿಂದ ಏರ್ಪೋರ್ಟ್ ನಲ್ಲಿ ವಿಮಾನಕ್ಕಾಗಿ ಕಾಯುತ್ತಿದ್ದರು. ನೇರ ವಿಮಾನ ಸಿಗದೆ ಕತಾರ್ ಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಕಾಬೂಲಿನಲ್ಲಿರುವ ಮಿಲಿಟರಿ ವಾಯುನೆಲೆ ಆಗಸ್ಟ್ 31ರ ವರೆಗೆ ಸುರಕ್ಷಿತ ಎನ್ನಲಾಗುತ್ತಿದೆ. ಅಲ್ಲಿ ವರೆಗೂ ಜಾಗ ಖಾಲಿ ಮಾಡಲು ತಾಲಿಬಾನ್ ಸಂಘಟನೆ ಗಡುವು ನೀಡಿದೆ. ಸ್ಥಳೀಯರು ಸೇರಿದಂತೆ, ಹಲವು ದೇಶಗಳ ನಿವಾಸಿಗಳು ಅಲ್ಲಿ ಆಶ್ರಯ ಪಡೆದಿದ್ದಾರೆ. ಬೇರೆ ಬೇರೆ ಕಡೆಗಳಿಂದ ಬರುವ ವಿಮಾನಗಳಲ್ಲಿ ತಮ್ಮ ದೇಶಗಳಿಗೆ ತೆರಳುತ್ತಿದ್ದಾರೆ. ಗುಂಪು ಗುಂಪಾಗಿ ಜನರು ಅಲ್ಲಿಗೆ ಆಗಮಿಸುತ್ತಿದ್ದು, ಇನ್ನೆರಡು ದಿನದಲ್ಲಿ ಅಲ್ಲಿ ಆಹಾರ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಮೆಲ್ವಿನ್ ಹೇಳಿದ್ದಾರೆ.
Mangalore Ullal Man Melwin stranded in Afghanistan reaches home town safely shares experience. Melwin was working in the air base of Afghan says the Tailbans didn't invade the air base that's how we were safe.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm