ಬ್ರೇಕಿಂಗ್ ನ್ಯೂಸ್
19-08-21 05:45 pm Richard, Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಅಫ್ಘಾನಿಸ್ತಾನದಲ್ಲಿ ಮಂಗಳೂರು ಮೂಲದ ಸಿಸ್ಟರ್ ಒಬ್ಬರು ಸಿಕ್ಕಿಬಿದ್ದಿದ್ದಾರೆ. ಮೂರು ವರ್ಷಗಳ ಹಿಂದೆ ಸಿಸ್ಟರ್ ಆಗಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ತೆರಳಿದ್ದ 50 ವರ್ಷದ ಸಿಸ್ಟರ್ ಥೆರೆಸಾ ಕ್ರಾಸ್ತಾ ಕಾಬೂಲಿನಲ್ಲಿ ಸಿಕ್ಕಿಬಿದ್ದಿದ್ದು, ಮರಳಿ ಬರಲಾಗದೆ ಒದ್ದಾಡುತ್ತಿದ್ದಾರೆ.
ಸಿಸ್ಟರ್ ಥೆರೆಸಾ ಕ್ರಾಸ್ತಾ, ಮೂರು ವರ್ಷಗಳ ಹಿಂದೆ ಇಟಲಿ ಮೂಲದ ಎನ್ ಜಿಓ ಸಂಸ್ಥೆಯೊಂದರಲ್ಲಿ ಸಿಸ್ಟರ್ ಆಗಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿಗೆ ತೆರಳಿದ್ದರು. ಮೂಲತಃ ಕಾಸರಗೋಡು ಜಿಲ್ಲೆಯ ಬೇಳ ನಿವಾಸಿಯಾಗಿರುವ ಥೆರೆಸಾ ಈ ಹಿಂದೆ ನೆಲ್ಯಾಡಿಯ ಕಾನ್ವೆಂಟ್ ಒಂದರಲ್ಲಿ ಸಿಸ್ಟರ್ ಆಗಿದ್ದರು. ಆನಂತರ ಜಪ್ಪು ನಲ್ಲಿರುವ ಪ್ರಶಾಂತ ನಿವಾಸ ಆಶ್ರಮದಲ್ಲಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿಯಲ್ಲಿದ್ದ ಥೆರೆಸಾ ಅವರನ್ನು ಇಟಲಿಯ ಸೇವಾ ಸಂಸ್ಥೆಯು ಕರೆದ ಕಾರಣ ಮೂರು ವರ್ಷಗಳ ಹಿಂದೆ ಕಳಿಸಿಕೊಡಲಾಗಿತ್ತು. ಅವರಿಗೆ ಕಾಬೂಲಿನಲ್ಲಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ಜವಾಬ್ದಾರಿ ನೀಡಲಾಗಿತ್ತು. ಇತರ ಪಾಕಿಸ್ಥಾನಿ ಮೂಲದ ಸಿಸ್ಟರ್ ಗಳ ಜೊತೆ ಥೆರೆಸಾ ಅಲ್ಲಿದ್ದರು. ಆದರೆ, ಈಗ ತಾಲಿಬಾನಿಗಳು ಅಲ್ಲಿನ ಸರಕಾರವನ್ನು ಕಿತ್ತು ಅಧಿಕಾರಕ್ಕೇರುತ್ತಿದ್ದಂತೆ ಆತಂಕ ಮನೆಮಾಡಿದೆ.

ರಾಜಧಾನಿ ಕಾಬೂಲಿನ ಏರ್ಪೋರ್ಟ್ ಬಳಿಯಲ್ಲೇ ಸಿಸ್ಟರ್ ಥೆರೆಸಾ ಇದ್ದಾರೆ. ಆದರೆ, ಆಶ್ರಮದಿಂದ ಹೊರಗೆ ಬರುವಂತೆ ಇಲ್ಲ. ಹೊರಗೆ ಏನಾಗುತ್ತಿದೆ ಎಂದು ನೋಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. 30 ಜನ ಅನಾಥ ಬುದ್ಧಿಮಾಂದ್ಯ ಮಕ್ಕಳ ರಕ್ಷಣೆ ಮತ್ತು ಪಾಲನೆಯ ಹೊಣೆ ಹೊತ್ತಿರುವ ಸಿಸ್ಟರ್ ಅಲ್ಲಿಂದ ಹೇಗೆ ಬರುವುದು ಎನ್ನುವ ಚಿಂತೆಯಲ್ಲಿದ್ದಾರೆ. ಥೆರೆಸಾ ಇರುವ ಕಟ್ಟಡದ ಹೊರಭಾಗದಲ್ಲಿ ಮಿಲಿಟರಿ ಸೆಕ್ಯುರಿಟಿ ಇದ್ದಾರೆ. ಹೀಗಾಗಿ ಹೊರಗೆ ಹೋಗುವುದು ಸಾಧ್ಯವಿಲ್ಲ. ಸದ್ಯಕ್ಕೆ ಸುರಕ್ಷಿತವಾಗಿರುವುದಾಗಿ ಮಂಗಳೂರಿನ ಸಿಸ್ಟರ್ಸ್ ಆಫ್ ಚಾರಿಟಿಯ ಉಸ್ತುವಾರಿಗೆ ಥೆರೆಸಾ ತಿಳಿಸಿದ್ದಾರೆ. ಥೆರೆಸಾ ತಂಗಿಯರು ಕೂಡ ಮಂಗಳೂರಿನಲ್ಲಿ ಸಿಸ್ಟರ್ ಆಗಿದ್ದು ಸೇವಾ ಕಾರ್ಯ ನಡೆಸುತ್ತಿದ್ದಾರೆ.
Convent Sister Theresa Crasta from Sisters of Charity Mangaluru has been Stranded in Kabul Afghan. It is said that sister Theresa had left Mangaluru three years back and went to Kabul. She has been working under a NGO to look after Mentally challenged children. Theresa hails from Bela, Kasaragod. The sister of charity are now desperately seeking help from Govt of India.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm