ಬ್ರೇಕಿಂಗ್ ನ್ಯೂಸ್
19-08-21 05:45 pm Richard, Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 19: ಅಫ್ಘಾನಿಸ್ತಾನದಲ್ಲಿ ಮಂಗಳೂರು ಮೂಲದ ಸಿಸ್ಟರ್ ಒಬ್ಬರು ಸಿಕ್ಕಿಬಿದ್ದಿದ್ದಾರೆ. ಮೂರು ವರ್ಷಗಳ ಹಿಂದೆ ಸಿಸ್ಟರ್ ಆಗಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ತೆರಳಿದ್ದ 50 ವರ್ಷದ ಸಿಸ್ಟರ್ ಥೆರೆಸಾ ಕ್ರಾಸ್ತಾ ಕಾಬೂಲಿನಲ್ಲಿ ಸಿಕ್ಕಿಬಿದ್ದಿದ್ದು, ಮರಳಿ ಬರಲಾಗದೆ ಒದ್ದಾಡುತ್ತಿದ್ದಾರೆ.
ಸಿಸ್ಟರ್ ಥೆರೆಸಾ ಕ್ರಾಸ್ತಾ, ಮೂರು ವರ್ಷಗಳ ಹಿಂದೆ ಇಟಲಿ ಮೂಲದ ಎನ್ ಜಿಓ ಸಂಸ್ಥೆಯೊಂದರಲ್ಲಿ ಸಿಸ್ಟರ್ ಆಗಿ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿಗೆ ತೆರಳಿದ್ದರು. ಮೂಲತಃ ಕಾಸರಗೋಡು ಜಿಲ್ಲೆಯ ಬೇಳ ನಿವಾಸಿಯಾಗಿರುವ ಥೆರೆಸಾ ಈ ಹಿಂದೆ ನೆಲ್ಯಾಡಿಯ ಕಾನ್ವೆಂಟ್ ಒಂದರಲ್ಲಿ ಸಿಸ್ಟರ್ ಆಗಿದ್ದರು. ಆನಂತರ ಜಪ್ಪು ನಲ್ಲಿರುವ ಪ್ರಶಾಂತ ನಿವಾಸ ಆಶ್ರಮದಲ್ಲಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳುವ ಕೆಲಸ ಮಾಡುತ್ತಿದ್ದರು.
ಮಂಗಳೂರಿನ ಸಿಸ್ಟರ್ ಆಫ್ ಚಾರಿಟಿಯಲ್ಲಿದ್ದ ಥೆರೆಸಾ ಅವರನ್ನು ಇಟಲಿಯ ಸೇವಾ ಸಂಸ್ಥೆಯು ಕರೆದ ಕಾರಣ ಮೂರು ವರ್ಷಗಳ ಹಿಂದೆ ಕಳಿಸಿಕೊಡಲಾಗಿತ್ತು. ಅವರಿಗೆ ಕಾಬೂಲಿನಲ್ಲಿ ಬುದ್ಧಿಮಾಂದ್ಯ ಮಕ್ಕಳನ್ನು ನೋಡಿಕೊಳ್ಳಲು ಜವಾಬ್ದಾರಿ ನೀಡಲಾಗಿತ್ತು. ಇತರ ಪಾಕಿಸ್ಥಾನಿ ಮೂಲದ ಸಿಸ್ಟರ್ ಗಳ ಜೊತೆ ಥೆರೆಸಾ ಅಲ್ಲಿದ್ದರು. ಆದರೆ, ಈಗ ತಾಲಿಬಾನಿಗಳು ಅಲ್ಲಿನ ಸರಕಾರವನ್ನು ಕಿತ್ತು ಅಧಿಕಾರಕ್ಕೇರುತ್ತಿದ್ದಂತೆ ಆತಂಕ ಮನೆಮಾಡಿದೆ.
ರಾಜಧಾನಿ ಕಾಬೂಲಿನ ಏರ್ಪೋರ್ಟ್ ಬಳಿಯಲ್ಲೇ ಸಿಸ್ಟರ್ ಥೆರೆಸಾ ಇದ್ದಾರೆ. ಆದರೆ, ಆಶ್ರಮದಿಂದ ಹೊರಗೆ ಬರುವಂತೆ ಇಲ್ಲ. ಹೊರಗೆ ಏನಾಗುತ್ತಿದೆ ಎಂದು ನೋಡುವುದಕ್ಕೂ ಸಾಧ್ಯವಾಗದ ಸ್ಥಿತಿಯಿದೆ. 30 ಜನ ಅನಾಥ ಬುದ್ಧಿಮಾಂದ್ಯ ಮಕ್ಕಳ ರಕ್ಷಣೆ ಮತ್ತು ಪಾಲನೆಯ ಹೊಣೆ ಹೊತ್ತಿರುವ ಸಿಸ್ಟರ್ ಅಲ್ಲಿಂದ ಹೇಗೆ ಬರುವುದು ಎನ್ನುವ ಚಿಂತೆಯಲ್ಲಿದ್ದಾರೆ. ಥೆರೆಸಾ ಇರುವ ಕಟ್ಟಡದ ಹೊರಭಾಗದಲ್ಲಿ ಮಿಲಿಟರಿ ಸೆಕ್ಯುರಿಟಿ ಇದ್ದಾರೆ. ಹೀಗಾಗಿ ಹೊರಗೆ ಹೋಗುವುದು ಸಾಧ್ಯವಿಲ್ಲ. ಸದ್ಯಕ್ಕೆ ಸುರಕ್ಷಿತವಾಗಿರುವುದಾಗಿ ಮಂಗಳೂರಿನ ಸಿಸ್ಟರ್ಸ್ ಆಫ್ ಚಾರಿಟಿಯ ಉಸ್ತುವಾರಿಗೆ ಥೆರೆಸಾ ತಿಳಿಸಿದ್ದಾರೆ. ಥೆರೆಸಾ ತಂಗಿಯರು ಕೂಡ ಮಂಗಳೂರಿನಲ್ಲಿ ಸಿಸ್ಟರ್ ಆಗಿದ್ದು ಸೇವಾ ಕಾರ್ಯ ನಡೆಸುತ್ತಿದ್ದಾರೆ.
Convent Sister Theresa Crasta from Sisters of Charity Mangaluru has been Stranded in Kabul Afghan. It is said that sister Theresa had left Mangaluru three years back and went to Kabul. She has been working under a NGO to look after Mentally challenged children. Theresa hails from Bela, Kasaragod. The sister of charity are now desperately seeking help from Govt of India.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm