ಬ್ರೇಕಿಂಗ್ ನ್ಯೂಸ್
22-08-21 10:40 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿದ್ದ ಮತ್ತೆ ಐದು ಮಂದಿ ಮಂಗಳೂರು ಮೂಲದ ನಿವಾಸಿಗಳು ಭಾರತದ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಬಂದಿದ್ದಾರೆ.
ವಾಯುಪಡೆ ವಿಮಾನದಲ್ಲಿ ಭಾರತ ಮೂಲದ ನೂರಾರು ನಿವಾಸಿಗಳನ್ನು ಕಾಬೂಲಿನಿಂದ ತಜಕಿಸ್ತಾನಕ್ಕೆ ಒಯ್ಯಲಾಗಿತ್ತು. ತಜಕಿಸ್ತಾನ ಭಾರತದ ಮಿತ್ರರಾಷ್ಟ್ರ ಆಗಿರುವುದರಿಂದ ಕಾಬೂಲಿನಿಂದ ಹತ್ತಿರ ಇರುವ ತಜಕಿಸ್ತಾನಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಕಾಬೂಲ್ ಏರ್ಪೋರ್ಟ್ ನಲ್ಲಿ ವಿವಿಧ ದೇಶಗಳ ವಿಮಾನಗಳು ತಮ್ಮ ನಿವಾಸಿಗಳನ್ನು ಒಯ್ಯಲು ಸರದಿಯಂತೆ ಸಾಲು ಗಟ್ಟಿರುವುದರಿಂದ ದೊಡ್ಡ ಗಾತ್ರದ ವಿಮಾನಗಳು ಇಳಿಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.
ಸದ್ಯ ಕೆಲವು ಅಫ್ಘನ್ ನಿವಾಸಿಗಳು ಸೇರಿದಂತೆ 150 ಕ್ಕೂ ಹೆಚ್ಚು ಮಂದಿಯನ್ನು ಭಾರತೀಯ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿದೆ. ಅದರಲ್ಲಿ ಮಂಗಳೂರಿನ ಐದು ಮಂದಿ ಇದ್ದಾರೆಂದು ವಿಮಾನ ಯಾನ ಸಚಿವಾಲಯ ದೃಢಪಡಿಸಿದೆ. ಇದನ್ನು ಮಂಗಳೂರು ಪೊಲೀಸರು ಕೂಡ ಖಚಿಪಡಿಸಿದ್ದಾರೆ.
ಮೂಡುಬಿದ್ರೆ ನಿವಾಸಿ ಜಗದೀಶ ಪೂಜಾರಿ, ದಿನೇಶ್ ರೈ ಬಜ್ಪೆ, ತೊಕ್ಕೊಟ್ಟಿನ ಪ್ರಸಾದ್ ಆನಂದ್, ಕಿನ್ನಿಗೋಳಿಯ ಡೆಸ್ಮಂಡ್ ಡೇವಿಡ್ ಡಿಸೋಜ, ಮಂಗಳೂರು ಉರ್ವಾ ನಿವಾಸಿ ಶ್ರವಣ್ ಅಂಚನ್ ಈಗ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರು ಬೆಂಗಳೂರು ಮೂಲಕ ಮಂಗಳೂರಿಗೆ ಬರಲಿದ್ದಾರೆ. ಇವರ ಜೊತೆಗೆ ಒಬ್ಬ ಬೆಂಗಳೂರು ನಿವಾಸಿ ಹಿರೇಕ್ ದೇಬನಾಥ್, ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿ ತನ್ವೀನ್ ಅಬ್ದುಲ್ ಕೂಡ ಅಫ್ಘಾನಿಸ್ತಾನದಿಂದ ಬಂದಿದ್ದಾರೆ.
ಮಂಗಳೂರು ಮೂಲದ ಜೆರೋಮ್ ಸಿಕ್ವೇರಾ ಮತ್ತು ಚಿಕ್ಕಮಗಳೂರಿನ ಎನ್.ಆರ್. ಪುರದ ಫಾದರ್ ರಾಬರ್ಟ್ ಕ್ಲೈವ್ ಕಾಬೂಲ್ ಏರ್ಪೋರ್ಟ್ ನಲ್ಲಿ ಸುರಕ್ಷಿತವಾಗಿದ್ದಾರೆ. ಅವರನ್ನು ಕರೆತರುವ ಕೆಲಸ ಆಗುತ್ತಿದೆ ಎಂದು ವಿದೇಶಾಂಗ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
Five Mangaloreans stranded in Afghan Kabul rescued reach Delhi Airport
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
11-02-26 03:45 pm
Mangalore Correspondent
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am