ಬ್ರೇಕಿಂಗ್ ನ್ಯೂಸ್
22-08-21 10:40 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿದ್ದ ಮತ್ತೆ ಐದು ಮಂದಿ ಮಂಗಳೂರು ಮೂಲದ ನಿವಾಸಿಗಳು ಭಾರತದ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಬಂದಿದ್ದಾರೆ.
ವಾಯುಪಡೆ ವಿಮಾನದಲ್ಲಿ ಭಾರತ ಮೂಲದ ನೂರಾರು ನಿವಾಸಿಗಳನ್ನು ಕಾಬೂಲಿನಿಂದ ತಜಕಿಸ್ತಾನಕ್ಕೆ ಒಯ್ಯಲಾಗಿತ್ತು. ತಜಕಿಸ್ತಾನ ಭಾರತದ ಮಿತ್ರರಾಷ್ಟ್ರ ಆಗಿರುವುದರಿಂದ ಕಾಬೂಲಿನಿಂದ ಹತ್ತಿರ ಇರುವ ತಜಕಿಸ್ತಾನಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಕಾಬೂಲ್ ಏರ್ಪೋರ್ಟ್ ನಲ್ಲಿ ವಿವಿಧ ದೇಶಗಳ ವಿಮಾನಗಳು ತಮ್ಮ ನಿವಾಸಿಗಳನ್ನು ಒಯ್ಯಲು ಸರದಿಯಂತೆ ಸಾಲು ಗಟ್ಟಿರುವುದರಿಂದ ದೊಡ್ಡ ಗಾತ್ರದ ವಿಮಾನಗಳು ಇಳಿಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.
ಸದ್ಯ ಕೆಲವು ಅಫ್ಘನ್ ನಿವಾಸಿಗಳು ಸೇರಿದಂತೆ 150 ಕ್ಕೂ ಹೆಚ್ಚು ಮಂದಿಯನ್ನು ಭಾರತೀಯ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿದೆ. ಅದರಲ್ಲಿ ಮಂಗಳೂರಿನ ಐದು ಮಂದಿ ಇದ್ದಾರೆಂದು ವಿಮಾನ ಯಾನ ಸಚಿವಾಲಯ ದೃಢಪಡಿಸಿದೆ. ಇದನ್ನು ಮಂಗಳೂರು ಪೊಲೀಸರು ಕೂಡ ಖಚಿಪಡಿಸಿದ್ದಾರೆ.
ಮೂಡುಬಿದ್ರೆ ನಿವಾಸಿ ಜಗದೀಶ ಪೂಜಾರಿ, ದಿನೇಶ್ ರೈ ಬಜ್ಪೆ, ತೊಕ್ಕೊಟ್ಟಿನ ಪ್ರಸಾದ್ ಆನಂದ್, ಕಿನ್ನಿಗೋಳಿಯ ಡೆಸ್ಮಂಡ್ ಡೇವಿಡ್ ಡಿಸೋಜ, ಮಂಗಳೂರು ಉರ್ವಾ ನಿವಾಸಿ ಶ್ರವಣ್ ಅಂಚನ್ ಈಗ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರು ಬೆಂಗಳೂರು ಮೂಲಕ ಮಂಗಳೂರಿಗೆ ಬರಲಿದ್ದಾರೆ. ಇವರ ಜೊತೆಗೆ ಒಬ್ಬ ಬೆಂಗಳೂರು ನಿವಾಸಿ ಹಿರೇಕ್ ದೇಬನಾಥ್, ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿ ತನ್ವೀನ್ ಅಬ್ದುಲ್ ಕೂಡ ಅಫ್ಘಾನಿಸ್ತಾನದಿಂದ ಬಂದಿದ್ದಾರೆ.
ಮಂಗಳೂರು ಮೂಲದ ಜೆರೋಮ್ ಸಿಕ್ವೇರಾ ಮತ್ತು ಚಿಕ್ಕಮಗಳೂರಿನ ಎನ್.ಆರ್. ಪುರದ ಫಾದರ್ ರಾಬರ್ಟ್ ಕ್ಲೈವ್ ಕಾಬೂಲ್ ಏರ್ಪೋರ್ಟ್ ನಲ್ಲಿ ಸುರಕ್ಷಿತವಾಗಿದ್ದಾರೆ. ಅವರನ್ನು ಕರೆತರುವ ಕೆಲಸ ಆಗುತ್ತಿದೆ ಎಂದು ವಿದೇಶಾಂಗ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
Five Mangaloreans stranded in Afghan Kabul rescued reach Delhi Airport
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm