ಬ್ರೇಕಿಂಗ್ ನ್ಯೂಸ್
22-08-21 10:40 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿದ್ದ ಮತ್ತೆ ಐದು ಮಂದಿ ಮಂಗಳೂರು ಮೂಲದ ನಿವಾಸಿಗಳು ಭಾರತದ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಬಂದಿದ್ದಾರೆ.
ವಾಯುಪಡೆ ವಿಮಾನದಲ್ಲಿ ಭಾರತ ಮೂಲದ ನೂರಾರು ನಿವಾಸಿಗಳನ್ನು ಕಾಬೂಲಿನಿಂದ ತಜಕಿಸ್ತಾನಕ್ಕೆ ಒಯ್ಯಲಾಗಿತ್ತು. ತಜಕಿಸ್ತಾನ ಭಾರತದ ಮಿತ್ರರಾಷ್ಟ್ರ ಆಗಿರುವುದರಿಂದ ಕಾಬೂಲಿನಿಂದ ಹತ್ತಿರ ಇರುವ ತಜಕಿಸ್ತಾನಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಕಾಬೂಲ್ ಏರ್ಪೋರ್ಟ್ ನಲ್ಲಿ ವಿವಿಧ ದೇಶಗಳ ವಿಮಾನಗಳು ತಮ್ಮ ನಿವಾಸಿಗಳನ್ನು ಒಯ್ಯಲು ಸರದಿಯಂತೆ ಸಾಲು ಗಟ್ಟಿರುವುದರಿಂದ ದೊಡ್ಡ ಗಾತ್ರದ ವಿಮಾನಗಳು ಇಳಿಯಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.
ಸದ್ಯ ಕೆಲವು ಅಫ್ಘನ್ ನಿವಾಸಿಗಳು ಸೇರಿದಂತೆ 150 ಕ್ಕೂ ಹೆಚ್ಚು ಮಂದಿಯನ್ನು ಭಾರತೀಯ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿದೆ. ಅದರಲ್ಲಿ ಮಂಗಳೂರಿನ ಐದು ಮಂದಿ ಇದ್ದಾರೆಂದು ವಿಮಾನ ಯಾನ ಸಚಿವಾಲಯ ದೃಢಪಡಿಸಿದೆ. ಇದನ್ನು ಮಂಗಳೂರು ಪೊಲೀಸರು ಕೂಡ ಖಚಿಪಡಿಸಿದ್ದಾರೆ.
ಮೂಡುಬಿದ್ರೆ ನಿವಾಸಿ ಜಗದೀಶ ಪೂಜಾರಿ, ದಿನೇಶ್ ರೈ ಬಜ್ಪೆ, ತೊಕ್ಕೊಟ್ಟಿನ ಪ್ರಸಾದ್ ಆನಂದ್, ಕಿನ್ನಿಗೋಳಿಯ ಡೆಸ್ಮಂಡ್ ಡೇವಿಡ್ ಡಿಸೋಜ, ಮಂಗಳೂರು ಉರ್ವಾ ನಿವಾಸಿ ಶ್ರವಣ್ ಅಂಚನ್ ಈಗ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರು ಬೆಂಗಳೂರು ಮೂಲಕ ಮಂಗಳೂರಿಗೆ ಬರಲಿದ್ದಾರೆ. ಇವರ ಜೊತೆಗೆ ಒಬ್ಬ ಬೆಂಗಳೂರು ನಿವಾಸಿ ಹಿರೇಕ್ ದೇಬನಾಥ್, ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿ ತನ್ವೀನ್ ಅಬ್ದುಲ್ ಕೂಡ ಅಫ್ಘಾನಿಸ್ತಾನದಿಂದ ಬಂದಿದ್ದಾರೆ.
ಮಂಗಳೂರು ಮೂಲದ ಜೆರೋಮ್ ಸಿಕ್ವೇರಾ ಮತ್ತು ಚಿಕ್ಕಮಗಳೂರಿನ ಎನ್.ಆರ್. ಪುರದ ಫಾದರ್ ರಾಬರ್ಟ್ ಕ್ಲೈವ್ ಕಾಬೂಲ್ ಏರ್ಪೋರ್ಟ್ ನಲ್ಲಿ ಸುರಕ್ಷಿತವಾಗಿದ್ದಾರೆ. ಅವರನ್ನು ಕರೆತರುವ ಕೆಲಸ ಆಗುತ್ತಿದೆ ಎಂದು ವಿದೇಶಾಂಗ ಇಲಾಖೆಯ ಮೂಲಗಳಿಂದ ತಿಳಿದುಬಂದಿದೆ.
Five Mangaloreans stranded in Afghan Kabul rescued reach Delhi Airport
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm