ಬ್ರೇಕಿಂಗ್ ನ್ಯೂಸ್
23-08-21 12:15 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 23: ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಮಿಲಿಟರಿ ಬೇಸಲ್ಲಿ ಅಕೌಂಟೆಟ್ ಆಗಿ ಉದ್ಯೋಗದಲ್ಲಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ತಮ್ಮ ನಿವಾಸಕ್ಕೆ ಆಗಮಿಸಿದ್ದಾರೆ.
ಪ್ರಸಾದ್ ಅವರನ್ನ ಕಾಬೂಲಿನಿಂದ ಅಮೆರಿಕಾ ನ್ಯಾಟೊ ಪಡೆ ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಟ್ ಮಾಡಿದ್ದರು. ಮೂರು ದಿವಸಗಳಿಂದ ಕತಾರಲ್ಲಿ ಉಳಿದುಕೊಂಡಿದ್ದ ಪ್ರಸಾದ್, ಅಲ್ಲಿಂದ ನಿನ್ನೆ ರಾತ್ರಿ ದೆಹಲಿಗೆ ತಲುಪಿದ್ದಾರೆ. ಕತಾರಿನಿಂದ ದೆಹಲಿಗೆ ಬರಲು ಇಂಡಿಯನ್ ಅಂಬಾಸಿಯವರು ಸಹಕಾರ ಮಾಡಿದ್ದಾಗಿ ಪ್ರಸಾದ್ ಹೇಳಿದ್ದಾರೆ.





ನಿನ್ನೆ ರಾತ್ರಿ ಪ್ರಸಾದ್ ದೆಹಲಿಗೆ ತಲುಪಿದ್ದು , ಇಂದು ಬೆಳಗ್ಗೆ ಮಂಗಳೂರು ಏರ್ಪೋರ್ಟ್ ತಲಪಿದ್ದಾರೆ. ಪ್ರಸಾದ್ ಅವರು 2013 ರಲ್ಲಿ ಅಕೌಂಟೆಟ್ ಆಗಿ ಕಾಬೂಲಿನ ನ್ಯಾಟೋ ಮಿಲಿಟರಿ ಬೇಸ್ ನಲ್ಲಿ ಕೆಲಸಕ್ಕೆ ಸೇರಿದ್ದರು. ಮಿಲಿಟರಿ ಬೇಸ್ ಒಳಗಡೆ ಲಂಡನ್ ಮೂಲದ ಓವರ್ ಸೀಸ್ ಸಪ್ಲೈ ಸರ್ವಿಸಸ್ ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದರು.
ಹೊರಗಡೆ ತಾಲಿಬಾನಿಗಳ ಅಟ್ಟಹಾಸ ನಡೆಯುತ್ತಿದ್ದು ನಾವು ಮಿಲಿಟರಿ ಬೇಸಲ್ಲಿ ಇದ್ದ ಕಾರಣ ಅಷ್ಟೊಂದು ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಕಾಬೂಲಲ್ಲಿ ಮೂರು ದಿವಸಗಳಿಂದ ಪ್ಲೈಟ್ ಗಳನ್ನ ಬ್ಲಾಕ್ ಮಾಡಿದ ನಂತರ ಸ್ವಲ್ಪ ಸಂಕಷ್ಟ ಅನುಭವಿಸುವಂತಾಗಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.
ಕಣೀರು ತೋಟ ನಿವಾಸಿಗಳಾದ ದಿವಂಗತ ಆನಂದ ಅಮೀನ್ ಮತ್ತು ಸರೋಜಿನಿ ದಂಪತಿಯ ಆರು ಮಕ್ಕಳಲ್ಲಿ ಪ್ರಸಾದ್ ಐದನೇಯವರಾಗಿದ್ದು, ವಿವಾಹಿತರಾಗಿದ್ದು ಇಬ್ಬರು ಗಂಡು ಮಕ್ಕಳಿದ್ದಾರೆ. ಪ್ರಸಾದ್ ಅವರು ಪತ್ನಿ ಭವಿಲ ಪ್ರಸಾದ್ ಮತ್ತು ತಮ್ಮ ಮುರಳೀರಾಜ್ ಕುಟುಂಬದ ಜೊತೆ ಕಣೀರು ತೋಟದಲ್ಲಿ ವಾಸಿಸುತ್ತಿದ್ದಾರೆ.
Video:
Mangalorean 39-Year-old Prasad Anand from Thokottu stranded in Afghan Kabul reaches Mangalore Via Delhi shares his experience of being under Taliban in Afghan. Thanks Indian govt from bringing him safe.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm