ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.




ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm