ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.
ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm