ಬ್ರೇಕಿಂಗ್ ನ್ಯೂಸ್
23-08-21 03:24 pm Mangaluru Correspondent ಕರಾವಳಿ
ಉಳ್ಳಾಲ, ಆ.23: ಕರ್ನಾಟಕ ಸರ್ಕಾರ ಗಡಿ ಬಂದ್ ಮಾಡಿರುವುದನ್ನು ವಿರೋಧಿಸಿ ಕೇರಳ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿ ವತಿಯಿಂದ ತಲಪಾಡಿ ಗಡಿಯಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಉದುಮ ಶಾಸಕ ಸಿ.ಎಚ್.ಕುಞಂಬು, ಕೊರೋನಾ ಹೆಸರಿನಲ್ಲಿ ಕರ್ನಾಟಕ ಬಿಜೆಪಿ ಸರ್ಕಾರ ಗಡಿ ಬಂದ್ ಮಾಡಿ ಗಡಿನಾಡ ಕೇರಳಿಗರಿಗೆ ತೊಂದರೆ ಮಾಡುತ್ತಿದೆ. ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ , ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಚುನಾವಣೆ ಸಂದರ್ಭದಲ್ಲಿ ಕೇರಳ ಭೇಟಿ ನೀಡಿ ಗಡಿನಾಡಿನ ಕೇರಳಿಗರಿಗೆ ಪೂರ್ಣ ಬೆಂಬಲ, ಸಹಕಾರ ತಮ್ಮಿಂದ ಇದೆ ಎಂದು ಹೇಳಿದ್ದರು.
ಆದರೆ ಅವರು ಹೇಳಿದ ಮಾತುಗಳನ್ನು ಉಳಿಸಲು ಅವರಿಗೆ ಆಗಲಿಲ್ಲ. ಕೇರಳದಲ್ಲಿ ಬಿಜೆಪಿ ಖಾತೆ ತೆರೆಯಲು ಆಗಲಿಲ್ಲ ಎಂಬ ಕಾರಣದಿಂದ ಕೇರಳಿಗರಿಗೆ ತೊಂದರೆ ಕೊಡಲು ಹೊರಟಿದ್ದು ನ್ಯಾಯೋಚಿತವಲ್ಲ. ಪ್ರತಿ ವಿಚಾರಗಳಿಗೂ ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ಕೇರಳ ಬಿಜೆಪಿಗರು ಈಗ ಮೌನ ಆಗಿದ್ದಾರೆ. ಭರವಸೆ ಮಾತು ನೀಡಿ ಅನ್ಯಾಯ ಮಾಡುವ ಕಟೀಲ್ ರಂತಹ ಸಂಸದರು ಆಡಳಿತ ನಡೆಸಲು ಯೋಗ್ಯರಲ್ಲ. ಗಡಿ ಬಂದ್ ಮಾಡುವ ಅಧಿಕಾರ ಕರ್ನಾಟಕ ಸರ್ಕಾರಕ್ಕೆ ಇಲ್ಲ. ಒಂದು ವೇಳೆ ಬಂದ್ ಮಾಡಲೇಬೇಕು ಎಂದಿದ್ದರೆ ಕೇಂದ್ರಕ್ಕೆ ಬಂದ್ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದರು.




ಸಿಪಿಐಎಂ ಮುಖಂಡ ದಯಾನಂದ್, ಶಂಕರ್ ರೈ ಮಾಸ್ಟರ್ ಮಾತನಾಡಿದರು. ಸಿಪಿಐಎಂ ಮಂಜೇಶ್ವರ ಏರಿಯಾ ಮುಖಂಡ ಅರವಿಂದ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ, ಪೈವಳಿಕೆ ಪಂಚಾಯಿತಿ ಅಧ್ಯಕ್ಷೆ ಜಯಂತಿ, ಬೂಬಾ ಡಿ., ಕಮಲಾಕ್ಷ, ನವೀನ್, ರವೀಂದ್ರ ಶೆಟ್ಟಿ, ಅಬ್ದುಲ್ ರಜಾಕ್, ಸುಬ್ಬಣ್ಣ ಆಳ್ವ, ಸಮಿತಿ ಸದಸ್ಯ ಅರವಿಂದ್ ಮೊದಲಾದವರು ಇದ್ದರು.
Talpady border issue CPIM protest blocking highway Demanding the Karnataka state govt to freely allow people of Kerala who has got one dose of vaccine.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm