ಬ್ರೇಕಿಂಗ್ ನ್ಯೂಸ್
23-08-21 11:12 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ವಾರದಿಂದಲೇ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು ನಿರ್ಧಾರಕ್ಕೆ ಬರಲಾಗಿದೆ.
ಸದ್ಯಕ್ಕೆ ಪಿಯುಸಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗ್ರೇಡೆಡ್ ಆಧರಿಸಿ, ಪಾಳಿಯಂತೆ ತರಗತಿಗಳನ್ನು ವಿಭಜಿಸಿ ಕ್ಲಾಸ್ ನಡೆಸಬೇಕು. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ನೀಡಲಾಗುವುದು ಎಂದು ಸಭೆಯ ಬಳಿಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅಲ್ಲದೆ, ಪಿಯುಸಿ ತರಗತಿಯ ಫಲಿತಾಂಶ ಆಧರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಎರಡು ವಾರ ಕಾಲ ಶಾಲೆ ಆರಂಭಿಸುವಂತಿಲ್ಲ. ಆನಂತರ ಶಾಲೆಗಳನ್ನು ನಡೆಸುವ ಬಗ್ಗೆ ಎರಡು ವಾರದ ಬಳಿಕ ನಿರ್ಧರಿಸಲಾಗುವುದು.

ಪಿಯುಸಿ ತರಗತಿ ಆರಂಭಿಸುವುದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಆರ್ ಟಿಪಿಸಿಆರ್ ಮಾಡಿಸಿ, ನೆಗೆಟಿವ್ ಹೊಂದಿರಬೇಕು. ಆಯಾ ಶಾಲೆಗಳ ಆಡಳಿತ ಮಂಡಳಿ ಈ ಬಗ್ಗೆ ಮುತುವರ್ಜಿ ವಹಿಸಬೇಕು.
ಸದ್ಯಕ್ಕೆ ಹತ್ತರಿಂದ ಹನ್ನೊಂದು ಸಾವಿರ ಟೆಸ್ಟಿಂಗ್ ಆಗ್ತಾ ಇದೆ. ಈ ಹಿಂದೆ ದಿನಕ್ಕೆ ಏಳು ಸಾವಿರ ಪರೀಕ್ಷೆ ಆಗುತ್ತಿದ್ದಾಗ ಪಾಸಿಟಿವ್ ರೇಟ್ 3.9 ಇತ್ತು. ಈಗ ನಾಲ್ಕರಷ್ಟು ಇದೆ. ಇಂದಿನ ಸಭೆಯಲ್ಲಿ ಟೆಸ್ಟಿಂಗನ್ನು ಹೆಚ್ಚಿಸಲು ನಿರ್ಧಾರಕ್ಕೆ ಬರಲಾಗಿದೆ. 14 ರಿಂದ 15 ಸಾವಿರ ಟೆಸ್ಟ್ ಮಾಡಲು ನಿರ್ಧರಿಸಿದ್ದು ಆಮೂಲಕ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಪತ್ತೆ ಮಾಡಲಾಗುವುದು. ಪಾಸಿಟಿವ್ ಹೆಚ್ಚು ಬಂದರೂ, ಅದನ್ನು ನಿರ್ವಹಣೆ ಮಾಡುವಷ್ಟು ಸಾಮರ್ಥ್ಯ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೇರಳದಿಂದ ಬಂದಿರುವ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದರೂ ಕ್ವಾರಂಟೈನ್ ಬಳಿಕ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ನೋಟೀಸ್ ನೀಡಲಾಗಿದೆ. ಯಾವ ಲೋಪದಿಂದ ಪಾಸಿಟಿವ್ ಆಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Mangalore Next week PUC colleges to start, delay in opening schools states Dc Rajendra Kumar
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm