ಬ್ರೇಕಿಂಗ್ ನ್ಯೂಸ್
23-08-21 11:12 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ವಾರದಿಂದಲೇ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು ನಿರ್ಧಾರಕ್ಕೆ ಬರಲಾಗಿದೆ.
ಸದ್ಯಕ್ಕೆ ಪಿಯುಸಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗ್ರೇಡೆಡ್ ಆಧರಿಸಿ, ಪಾಳಿಯಂತೆ ತರಗತಿಗಳನ್ನು ವಿಭಜಿಸಿ ಕ್ಲಾಸ್ ನಡೆಸಬೇಕು. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ನೀಡಲಾಗುವುದು ಎಂದು ಸಭೆಯ ಬಳಿಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅಲ್ಲದೆ, ಪಿಯುಸಿ ತರಗತಿಯ ಫಲಿತಾಂಶ ಆಧರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಎರಡು ವಾರ ಕಾಲ ಶಾಲೆ ಆರಂಭಿಸುವಂತಿಲ್ಲ. ಆನಂತರ ಶಾಲೆಗಳನ್ನು ನಡೆಸುವ ಬಗ್ಗೆ ಎರಡು ವಾರದ ಬಳಿಕ ನಿರ್ಧರಿಸಲಾಗುವುದು.

ಪಿಯುಸಿ ತರಗತಿ ಆರಂಭಿಸುವುದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಆರ್ ಟಿಪಿಸಿಆರ್ ಮಾಡಿಸಿ, ನೆಗೆಟಿವ್ ಹೊಂದಿರಬೇಕು. ಆಯಾ ಶಾಲೆಗಳ ಆಡಳಿತ ಮಂಡಳಿ ಈ ಬಗ್ಗೆ ಮುತುವರ್ಜಿ ವಹಿಸಬೇಕು.
ಸದ್ಯಕ್ಕೆ ಹತ್ತರಿಂದ ಹನ್ನೊಂದು ಸಾವಿರ ಟೆಸ್ಟಿಂಗ್ ಆಗ್ತಾ ಇದೆ. ಈ ಹಿಂದೆ ದಿನಕ್ಕೆ ಏಳು ಸಾವಿರ ಪರೀಕ್ಷೆ ಆಗುತ್ತಿದ್ದಾಗ ಪಾಸಿಟಿವ್ ರೇಟ್ 3.9 ಇತ್ತು. ಈಗ ನಾಲ್ಕರಷ್ಟು ಇದೆ. ಇಂದಿನ ಸಭೆಯಲ್ಲಿ ಟೆಸ್ಟಿಂಗನ್ನು ಹೆಚ್ಚಿಸಲು ನಿರ್ಧಾರಕ್ಕೆ ಬರಲಾಗಿದೆ. 14 ರಿಂದ 15 ಸಾವಿರ ಟೆಸ್ಟ್ ಮಾಡಲು ನಿರ್ಧರಿಸಿದ್ದು ಆಮೂಲಕ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಪತ್ತೆ ಮಾಡಲಾಗುವುದು. ಪಾಸಿಟಿವ್ ಹೆಚ್ಚು ಬಂದರೂ, ಅದನ್ನು ನಿರ್ವಹಣೆ ಮಾಡುವಷ್ಟು ಸಾಮರ್ಥ್ಯ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೇರಳದಿಂದ ಬಂದಿರುವ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದರೂ ಕ್ವಾರಂಟೈನ್ ಬಳಿಕ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ನೋಟೀಸ್ ನೀಡಲಾಗಿದೆ. ಯಾವ ಲೋಪದಿಂದ ಪಾಸಿಟಿವ್ ಆಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Mangalore Next week PUC colleges to start, delay in opening schools states Dc Rajendra Kumar
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm