ಬ್ರೇಕಿಂಗ್ ನ್ಯೂಸ್
23-08-21 11:12 pm Mangaluru correspondent ಕರಾವಳಿ
ಮಂಗಳೂರು, ಆಗಸ್ಟ್ 23: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ವಾರದಿಂದಲೇ ಪಿಯುಸಿ ತರಗತಿ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿದ್ದು ನಿರ್ಧಾರಕ್ಕೆ ಬರಲಾಗಿದೆ.
ಸದ್ಯಕ್ಕೆ ಪಿಯುಸಿ ತರಗತಿ ಆರಂಭಿಸಲು ನಿರ್ಧರಿಸಲಾಗಿದೆ. ಗ್ರೇಡೆಡ್ ಆಧರಿಸಿ, ಪಾಳಿಯಂತೆ ತರಗತಿಗಳನ್ನು ವಿಭಜಿಸಿ ಕ್ಲಾಸ್ ನಡೆಸಬೇಕು. ಈ ಬಗ್ಗೆ ಅಧಿಕೃತವಾಗಿ ಜಿಲ್ಲಾಡಳಿತದಿಂದ ಮಾರ್ಗಸೂಚಿ ನೀಡಲಾಗುವುದು ಎಂದು ಸಭೆಯ ಬಳಿಕ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಅಲ್ಲದೆ, ಪಿಯುಸಿ ತರಗತಿಯ ಫಲಿತಾಂಶ ಆಧರಿಸಿ ಶಾಲೆಗಳನ್ನು ಆರಂಭಿಸಲಾಗುವುದು. ಮುಂದಿನ ಎರಡು ವಾರ ಕಾಲ ಶಾಲೆ ಆರಂಭಿಸುವಂತಿಲ್ಲ. ಆನಂತರ ಶಾಲೆಗಳನ್ನು ನಡೆಸುವ ಬಗ್ಗೆ ಎರಡು ವಾರದ ಬಳಿಕ ನಿರ್ಧರಿಸಲಾಗುವುದು.

ಪಿಯುಸಿ ತರಗತಿ ಆರಂಭಿಸುವುದಕ್ಕೂ ಮುನ್ನ ಎಲ್ಲ ವಿದ್ಯಾರ್ಥಿಗಳ ಆರ್ ಟಿಪಿಸಿಆರ್ ಮಾಡಿಸಿ, ನೆಗೆಟಿವ್ ಹೊಂದಿರಬೇಕು. ಆಯಾ ಶಾಲೆಗಳ ಆಡಳಿತ ಮಂಡಳಿ ಈ ಬಗ್ಗೆ ಮುತುವರ್ಜಿ ವಹಿಸಬೇಕು.
ಸದ್ಯಕ್ಕೆ ಹತ್ತರಿಂದ ಹನ್ನೊಂದು ಸಾವಿರ ಟೆಸ್ಟಿಂಗ್ ಆಗ್ತಾ ಇದೆ. ಈ ಹಿಂದೆ ದಿನಕ್ಕೆ ಏಳು ಸಾವಿರ ಪರೀಕ್ಷೆ ಆಗುತ್ತಿದ್ದಾಗ ಪಾಸಿಟಿವ್ ರೇಟ್ 3.9 ಇತ್ತು. ಈಗ ನಾಲ್ಕರಷ್ಟು ಇದೆ. ಇಂದಿನ ಸಭೆಯಲ್ಲಿ ಟೆಸ್ಟಿಂಗನ್ನು ಹೆಚ್ಚಿಸಲು ನಿರ್ಧಾರಕ್ಕೆ ಬರಲಾಗಿದೆ. 14 ರಿಂದ 15 ಸಾವಿರ ಟೆಸ್ಟ್ ಮಾಡಲು ನಿರ್ಧರಿಸಿದ್ದು ಆಮೂಲಕ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಪತ್ತೆ ಮಾಡಲಾಗುವುದು. ಪಾಸಿಟಿವ್ ಹೆಚ್ಚು ಬಂದರೂ, ಅದನ್ನು ನಿರ್ವಹಣೆ ಮಾಡುವಷ್ಟು ಸಾಮರ್ಥ್ಯ ಜಿಲ್ಲೆಯಲ್ಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕೇರಳದಿಂದ ಬಂದಿರುವ 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೆಗೆಟಿವ್ ಸರ್ಟಿಫಿಕೇಟ್ ಹೊಂದಿದ್ದರೂ ಕ್ವಾರಂಟೈನ್ ಬಳಿಕ ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಈ ಬಗ್ಗೆ ಕಾಲೇಜು ಆಡಳಿತದ ವಿರುದ್ಧ ನೋಟೀಸ್ ನೀಡಲಾಗಿದೆ. ಯಾವ ಲೋಪದಿಂದ ಪಾಸಿಟಿವ್ ಆಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
Mangalore Next week PUC colleges to start, delay in opening schools states Dc Rajendra Kumar
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm