ಬ್ರೇಕಿಂಗ್ ನ್ಯೂಸ್
24-08-21 03:02 pm Mangaluru Correspondent ಕರಾವಳಿ
ಉಳ್ಳಾಲ, 24: ಉಳ್ಳಾಲ ಉಳಿಯದ ಮೆಲ್ವಿನ್ ಮೊಂತೇರೊ (45) ಅಫ್ಘಾನಿಸ್ತಾನದ ನರಕದಿಂದ ಕಳೆದ ವಾರ ಪಾರಾಗಿ ಬಂದಿದ್ದರು. ಉದ್ಯೋಗಕ್ಕಾಗಿ ತೆರಳಿ ಸಿಕ್ಕಿಬಿದ್ದಿದ್ದ ಮೆಲ್ವಿನ್ ಸಹೋದರ ಡೆಮ್ಸಿ ಮೊಂತೆರೊ ಕೂಡ ಇಂದು ಅಪ್ಘನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಸಾಗಿದ್ದಾರೆ.
ಕಳೆದ ಐದು ವರ್ಷಗಳಿಂದ ಕಾಬೂಲಿನ ಮಿಲಿಟರಿ ಬೇಸ್ ನಲ್ಲಿ ಇಕೊಲೊಗ್ ಇಂಟರ್ನ್ಯಾಷನಲ್ ಕಂಪನಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೆಮ್ಸಿ ಮೊಂತೆರೊ(29) ಇಂದು ಉಳ್ಳಾಲದ ಉಳಿಯದಲ್ಲಿರುವ ತನ್ನ ಮನೆಗೆ ಮರಳಿದ್ದಾರೆ.
ಕಳೆದ ಆ.17ರಂದು ಭಾರತೀಯ ವಾಯುಪಡೆ ಮೆಲ್ವಿನ್ ಮೊಂತೇರೊ ಅವರನ್ನ ಸುರಕ್ಷಿತವಾಗಿ ಭಾರತಕ್ಕೆ ಏರ್ ಲಿಫ್ಟ್ ಮಾಡಿತ್ತು. ಮೆಲ್ವಿನ್ ತಮ್ಮ ಡೆಮ್ಸಿಯನ್ನ ಮರುದಿವಸ ಆ.18 ರಂದು ನ್ಯಾಟೊ ಪಡೆಯು ಕಾಬೂಲಿನಿಂದ ಏರ್ ಲಿಪ್ಟ್ ಮಾಡಿತ್ತು. ಅಂದು ರಾತ್ರಿ ಇಡೀ ಕಾಬೂಲ್ ಏರ್ಪೋರ್ಟಲ್ಲಿ ಡೆಮ್ಸಿ ಸೇರಿ 155 ಮಂದಿ ಭಾರತೀಯರು ವಿಮಾನದೊಳಗೆ ಕಳೆದಿದ್ದರು.19 ರಂದು ಬೆಳಗ್ಗೆ ಡೆಮ್ಸಿ ಸೇರಿ ಒಟ್ಟು 155 ಮಂದಿಯನ್ನ ಕಾಬೂಲಿನಿಂದ ಕತಾರಿಗೆ ಏರ್ ಲಿಪ್ಟ್ ಮಾಡಲಾಗಿತ್ತು.





ಕತಾರ್ ಏರ್ಪೋರ್ಟಲ್ಲಿ ಡೆಮ್ಸಿ ನಾಲ್ಕು ದಿನ ಕಳೆದಿದ್ದು ಅಲ್ಲಿನ ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಅಲ್ಲಿದ್ದ ಭಾರತೀಯರನ್ನು ಶನಿವಾರ ರಾತ್ರಿ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿತ್ತು. ಆನಂತರ ಮುಂಬೈಗೆ ತಲುಪಿದ್ದು ಇಂದು ಮಧ್ಯಾಹ್ನ ಮಂಗಳೂರಿಗೆ ತಲುಪಿದ್ದಾರೆ.
ಉಳ್ಳಾಲ ಉಳಿಯದ ವಲೇರಿಯನ್ ಮೊಂತೇರೊ- ಸಿಸಿಲಿಯಾ ಮೊಂತೇರೊ ದಂಪತಿಯ ಎಂಟು ಮಕ್ಕಳಲ್ಲಿ ಮೆಲ್ವಿನ್ ಹಿರಿಯ ಮಗನಾದರೆ, ಡೆಮ್ಸಿ ಮೊಂತೇರೊ ಎಲ್ಲರಿಗೂ ಕಿರಿಯನಾಗಿದ್ದಾರೆ. ಮೆಲ್ವಿನ್ ಅವರು ಕಾಬೂಲಿನ ಮಿಲಿಟರಿ ಬೇಸಲ್ಲಿ ಇಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದರು. ಕಳೆದ ವಾರವಷ್ಟೆ ಅವರು ಸೇಫಾಗಿ ತಾಯ್ನಾಡಿಗೆ ಮರಳಿದ್ದು ಇಂದು ಅವರ ಸೋದರ ಡೆಮ್ಸಿ ಕೂಡ ಮನೆ ಸೇರಿದ್ದು ಉಳಿಯದ ಮೊಂತೆರೊ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.
ಮಾಜಿ ಸಚಿವ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ಉಳ್ಳಾಲ, ಉಳಿಯದ ಮೊಂತೇರೊ ಸಹೋದರರ ಮನೆಗೆ ತೆರಳಿ ಕ್ಷೇಮ ವಿಚಾರಿಸಿದ್ದಾರೆ. ಮೆಲ್ವಿನ್ ಮತ್ತು ಡೆಮ್ಸಿ ಸೋದರರು ಅಫ್ಘನ್ನಲ್ಲಿ ಅತಂತ್ರರಾಗಿ ಮರಳಿದ್ದರು. ಮೆಲ್ವಿನ್ ಕಳೆದ ವಾರ ಮರಳಿದ್ದರೆ, ಡೆಮ್ಸಿ ಇಂದು ಮನೆಗೆ ಬಂದಿದ್ದಾರೆ.
Stranded Dempsey Monterio stranded in Afghan Kabul reaches Mangaluru shares experience. Last night five from Kabul reached Mangaluru aiprort. Dempsey hails from Ullal. Dempsey has been working since five years at the Kabul Air base of Nato.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm