ಬ್ರೇಕಿಂಗ್ ನ್ಯೂಸ್
24-08-21 03:02 pm Mangaluru Correspondent ಕರಾವಳಿ
ಉಳ್ಳಾಲ, 24: ಉಳ್ಳಾಲ ಉಳಿಯದ ಮೆಲ್ವಿನ್ ಮೊಂತೇರೊ (45) ಅಫ್ಘಾನಿಸ್ತಾನದ ನರಕದಿಂದ ಕಳೆದ ವಾರ ಪಾರಾಗಿ ಬಂದಿದ್ದರು. ಉದ್ಯೋಗಕ್ಕಾಗಿ ತೆರಳಿ ಸಿಕ್ಕಿಬಿದ್ದಿದ್ದ ಮೆಲ್ವಿನ್ ಸಹೋದರ ಡೆಮ್ಸಿ ಮೊಂತೆರೊ ಕೂಡ ಇಂದು ಅಪ್ಘನ್ ರಾಷ್ಟ್ರದಿಂದ ತಾಯ್ನಾಡಿಗೆ ವಾಪಸಾಗಿದ್ದಾರೆ.
ಕಳೆದ ಐದು ವರ್ಷಗಳಿಂದ ಕಾಬೂಲಿನ ಮಿಲಿಟರಿ ಬೇಸ್ ನಲ್ಲಿ ಇಕೊಲೊಗ್ ಇಂಟರ್ನ್ಯಾಷನಲ್ ಕಂಪನಿಯಲ್ಲಿ ಎ.ಸಿ ಮೆಕ್ಯಾನಿಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೆಮ್ಸಿ ಮೊಂತೆರೊ(29) ಇಂದು ಉಳ್ಳಾಲದ ಉಳಿಯದಲ್ಲಿರುವ ತನ್ನ ಮನೆಗೆ ಮರಳಿದ್ದಾರೆ.
ಕಳೆದ ಆ.17ರಂದು ಭಾರತೀಯ ವಾಯುಪಡೆ ಮೆಲ್ವಿನ್ ಮೊಂತೇರೊ ಅವರನ್ನ ಸುರಕ್ಷಿತವಾಗಿ ಭಾರತಕ್ಕೆ ಏರ್ ಲಿಫ್ಟ್ ಮಾಡಿತ್ತು. ಮೆಲ್ವಿನ್ ತಮ್ಮ ಡೆಮ್ಸಿಯನ್ನ ಮರುದಿವಸ ಆ.18 ರಂದು ನ್ಯಾಟೊ ಪಡೆಯು ಕಾಬೂಲಿನಿಂದ ಏರ್ ಲಿಪ್ಟ್ ಮಾಡಿತ್ತು. ಅಂದು ರಾತ್ರಿ ಇಡೀ ಕಾಬೂಲ್ ಏರ್ಪೋರ್ಟಲ್ಲಿ ಡೆಮ್ಸಿ ಸೇರಿ 155 ಮಂದಿ ಭಾರತೀಯರು ವಿಮಾನದೊಳಗೆ ಕಳೆದಿದ್ದರು.19 ರಂದು ಬೆಳಗ್ಗೆ ಡೆಮ್ಸಿ ಸೇರಿ ಒಟ್ಟು 155 ಮಂದಿಯನ್ನ ಕಾಬೂಲಿನಿಂದ ಕತಾರಿಗೆ ಏರ್ ಲಿಪ್ಟ್ ಮಾಡಲಾಗಿತ್ತು.





ಕತಾರ್ ಏರ್ಪೋರ್ಟಲ್ಲಿ ಡೆಮ್ಸಿ ನಾಲ್ಕು ದಿನ ಕಳೆದಿದ್ದು ಅಲ್ಲಿನ ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಅಲ್ಲಿದ್ದ ಭಾರತೀಯರನ್ನು ಶನಿವಾರ ರಾತ್ರಿ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿತ್ತು. ಆನಂತರ ಮುಂಬೈಗೆ ತಲುಪಿದ್ದು ಇಂದು ಮಧ್ಯಾಹ್ನ ಮಂಗಳೂರಿಗೆ ತಲುಪಿದ್ದಾರೆ.
ಉಳ್ಳಾಲ ಉಳಿಯದ ವಲೇರಿಯನ್ ಮೊಂತೇರೊ- ಸಿಸಿಲಿಯಾ ಮೊಂತೇರೊ ದಂಪತಿಯ ಎಂಟು ಮಕ್ಕಳಲ್ಲಿ ಮೆಲ್ವಿನ್ ಹಿರಿಯ ಮಗನಾದರೆ, ಡೆಮ್ಸಿ ಮೊಂತೇರೊ ಎಲ್ಲರಿಗೂ ಕಿರಿಯನಾಗಿದ್ದಾರೆ. ಮೆಲ್ವಿನ್ ಅವರು ಕಾಬೂಲಿನ ಮಿಲಿಟರಿ ಬೇಸಲ್ಲಿ ಇಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದರು. ಕಳೆದ ವಾರವಷ್ಟೆ ಅವರು ಸೇಫಾಗಿ ತಾಯ್ನಾಡಿಗೆ ಮರಳಿದ್ದು ಇಂದು ಅವರ ಸೋದರ ಡೆಮ್ಸಿ ಕೂಡ ಮನೆ ಸೇರಿದ್ದು ಉಳಿಯದ ಮೊಂತೆರೊ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ.
ಮಾಜಿ ಸಚಿವ, ಮಂಗಳೂರು ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರು ಉಳ್ಳಾಲ, ಉಳಿಯದ ಮೊಂತೇರೊ ಸಹೋದರರ ಮನೆಗೆ ತೆರಳಿ ಕ್ಷೇಮ ವಿಚಾರಿಸಿದ್ದಾರೆ. ಮೆಲ್ವಿನ್ ಮತ್ತು ಡೆಮ್ಸಿ ಸೋದರರು ಅಫ್ಘನ್ನಲ್ಲಿ ಅತಂತ್ರರಾಗಿ ಮರಳಿದ್ದರು. ಮೆಲ್ವಿನ್ ಕಳೆದ ವಾರ ಮರಳಿದ್ದರೆ, ಡೆಮ್ಸಿ ಇಂದು ಮನೆಗೆ ಬಂದಿದ್ದಾರೆ.
Stranded Dempsey Monterio stranded in Afghan Kabul reaches Mangaluru shares experience. Last night five from Kabul reached Mangaluru aiprort. Dempsey hails from Ullal. Dempsey has been working since five years at the Kabul Air base of Nato.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm