ಬ್ರೇಕಿಂಗ್ ನ್ಯೂಸ್
25-08-21 01:08 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 25: ಬಿ.ಆರ್. ಶೆಟ್ಟಿ ತಾಯಿ ಮತ್ತು ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಎಲ್ಲ ವಿಭಾಗದ ಸಿಬ್ಬಂದಿ ದಿಢೀರ್ ಮುಷ್ಕರ ಹೂಡಿದ್ದಾರೆ. ಹೀಗಾಗಿ ಇಂದು ಎಮರ್ಜೆನ್ಸಿ ಸೇವೆಗಳನ್ನು ಹೊರತುಪಡಿಸಿ ಇತರ ಯಾವುದೇ ಚಿಕಿತ್ಸೆ ನೀಡದೇ ವೈದ್ಯಕೀಯ ಸಿಬಂದಿ ಮುಷ್ಕರ ನಡೆಸಿದ್ದಾರೆ.
ಇದರಿಂದಾಗಿ ಚಿಕಿತ್ಸೆಗಾಗಿ ಬಂದ ರೋಗಿಗಳು ಆಸ್ಪತ್ರೆ ಹೊರಗಡೆ ಪರದಾಟ ಅನುಭವಿಸುತ್ತಿದ್ದಾರೆ. ವೇತನ ನೀಡದ ಕಾರಣವೊಡ್ಡಿ ಎರಡು ದಿನಗಳ ಹಿಂದೆ ಮುಷ್ಕರ ಹೂಡಿದ್ದಕ್ಕಾಗಿ ಅಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ 16 ಸಿಬಂದಿಯನ್ನು ನಿನ್ನೆ ಬಿಆರ್ ಎಸ್ ಆಸ್ಪತ್ರೆಯ ಆಡಳಿತ ಕೆಲಸದಿಂದ ವಜಾ ಮಾಡಿತ್ತು.








16 ಮಂದಿಯನ್ನು ದಿಢೀರ್ ಕೆಲಸದಿಂದ ಕಿತ್ತು ಹಾಕಿದ್ದನ್ನು ವಿರೋಧಿಸಿ ಇಂದು ಆಸ್ಪತ್ರೆಯ ನೂರಕ್ಕೂ ಹೆಚ್ಚು ಸಿಬ್ಬಂದಿ ಮುಷ್ಕರ ಹೂಡಿದ್ದು ಕೆಲಸ ಮಾಡದೆ ಹೊರಗಡೆ ನಿಂತಿದ್ದಾರೆ. 16 ಸಿಬ್ಬಂದಿಯನ್ನು ವಜಾ ಮಾಡಿದ್ದಕ್ಕೆ ಕಾರಣ ಕೊಡಬೇಕು. ಹಾಗೇ ತೆಗೆಯುವುದಿದ್ದರೆ ನಮ್ಮೆಲ್ಲರನ್ನೂ ಕೆಲಸದಿಂದ ತೆಗೆಯಬೇಕು. ನ್ಯಾಯ ಸಿಗುವವರೆಗೂ ನಾವು ಪ್ರತಿಭಟನೆ ನಡೆಸುತ್ತೇವೆ ಎಂದು ಮುಷ್ಕರ ನಿರತರು ಪಟ್ಟು ಹಿಡಿದಿದ್ದಾರೆ.
ಮಹಿಳೆಯರು, ಪುರುಷರು ಸೇರಿ ಆಸ್ಪತ್ರೆ ಸಿಬ್ಬಂದಿ ಮುಷ್ಕರ ನಿರತರಾಗಿದ್ದು ಆಸ್ಪತ್ರೆ ಮ್ಯಾನೇಜ್ ಮೆಂಟ್ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ರಾತ್ರಿಯಿಂದ ನಿರಂತರ ಮುಷ್ಕರ ನಡೆಯುತ್ತಿದ್ದು ಆಸ್ಪತ್ರೆಯ ಸ್ಥಿತಿ ಬಿಗಡಾಯಿಸಿದೆ. ಈ ನಡುವೆ, ಶಾಸಕ ರಘುಪತಿ ಭಟ್ ಮುಷ್ಕರ ನಿರತರನ್ನು ಮಾತುಕತೆಗೆ ಕರೆದಿದ್ದಾರೆ.
Video:
B R Shetty hospital in Udupi faces salary issue staffs and doctors protest 16 staffs suspended
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm