ಬ್ರೇಕಿಂಗ್ ನ್ಯೂಸ್
26-08-21 08:32 pm Mangaluru Correspondent ಕರಾವಳಿ
ಮಂಗಳೂರು, ಆ.26: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ನಿರ್ದೇಶನ ನೀಡಿದ್ದಾರೆ.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಸೆಪ್ಟೆಂಬರ್ 15ರೊಳಗೆ ಕಡಿಮೆಯಾದಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್ವೈಸ್ ಮೂಲಕ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು, ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕವೇ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಿದರು.
ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು, ಲಸಿಕೆ ಪಡೆಯದ ಸಿಬ್ಬಂದಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳದ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು, ನೆಟ್ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಕೆಲವು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ, ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತಹ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕಿಶೋರ್ ಕೆ, ಕಾಲೇಜು ಶಿಕ್ಷಣ ವಿಶೇಷಾಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿಶ್ವವಿದ್ಯಾನಿಲಯದ ನೋಡಲ್ ಅಧಿಕಾರಿ ಡಾ. ದಾನೇಶ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore DC orders not to start Graduate and Postgraduate classes offline till Sep 15th
16-07-25 11:47 am
HK News Desk
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 11:42 am
Mangalore Correspondent
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm