ಬ್ರೇಕಿಂಗ್ ನ್ಯೂಸ್
26-08-21 08:32 pm Mangaluru Correspondent ಕರಾವಳಿ
ಮಂಗಳೂರು, ಆ.26: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಶೇ. 2.4ರಷ್ಟಿರುವ ಕಾರಣ ಮುಂಬರುವ ಸೆಪ್ಟೆಂಬರ್ 15ರ ವರೆಗೂ ಯಾವುದೇ ಸ್ನಾತಕ ಮತ್ತು ಸ್ನಾತಕೋತ್ತರ ಕಾಲೇಜುಗಳ ಭೌತಿಕ ತರಗತಿಗಳನ್ನು ಆರಂಭಿಸದೇ ಆನ್ಲೈನ್ ಮೂಲಕವಷ್ಟೇ ತರಗತಿ ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ನಿರ್ದೇಶನ ನೀಡಿದ್ದಾರೆ.
ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸ್ತುತ ಜಿಲ್ಲೆಯ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಸೆಪ್ಟೆಂಬರ್ 15ರೊಳಗೆ ಕಡಿಮೆಯಾದಲ್ಲಿ ಮತ್ತೊಮ್ಮೆ ಸಂಬಂಧಪಟ್ಟ ಕಾಲೇಜು ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಭೌತಿಕ ತರಗತಿಗಳನ್ನು ಪ್ರಾರಂಭಿಸಲು ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ಬ್ಯಾಚ್ವೈಸ್ ಮೂಲಕ ಕೋವಿಡ್ ಮಾರ್ಗಸೂಚಿಗಳ ಅನುಸಾರವೇ ನಡೆಸಬೇಕು, ವಿಜ್ಞಾನ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ವಿಭಾಗಗಳ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕವೇ ತರಗತಿಗಳನ್ನು ನಡೆಸುವಂತೆ ಸೂಚನೆ ನೀಡಿದರು.

ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದಿರಬೇಕು, ಲಸಿಕೆ ಪಡೆಯದ ಸಿಬ್ಬಂದಿಗಳು ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳದ ಮಾಹಿತಿಯನ್ನು ಕಾಲೇಜು ಶಿಕ್ಷಣಾಧಿಕಾರಿಗಳು ನೀಡಬೇಕು, ನೆಟ್ವರ್ಕ್ ಸಮಸ್ಯೆಯಿಂದ ಗ್ರಾಮೀಣ ಭಾಗದ ಕೆಲವು ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳಿಗೆ ಹಾಜರಾಗುವುದು ಸಮಸ್ಯೆಯಾಗಿದೆ, ಜಿಲ್ಲಾಡಳಿತದಿಂದ ಪರ್ಯಾಯ ಮಾರ್ಗ ಹುಡುಕಿ ಅಂತಹ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗುವ ವ್ಯವಸ್ಥೆ ಮಾಡಲಾಗುವುದು ಎಂದರು.
ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕಿಶೋರ್ ಕೆ, ಕಾಲೇಜು ಶಿಕ್ಷಣ ವಿಶೇಷಾಧಿಕಾರಿ ಜಯಕರ ಭಂಡಾರಿ, ನಿಟ್ಟೆ ವಿಶ್ವವಿದ್ಯಾನಿಲಯದ ನೋಡಲ್ ಅಧಿಕಾರಿ ಡಾ. ದಾನೇಶ್ ಹಾಗೂ ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Mangalore DC orders not to start Graduate and Postgraduate classes offline till Sep 15th
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 04:22 pm
HK News Desk
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
11-02-26 03:45 pm
Mangalore Correspondent
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am