ಬ್ರೇಕಿಂಗ್ ನ್ಯೂಸ್
27-08-21 03:10 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಆಹಾರ ತಯಾರಿ ಕೇಂದ್ರಗಳಲ್ಲಿ ಮಿತಿಗಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಕೆ ಮಾಡುವುದು ಪತ್ತೆಯಾದರೆ, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಆಹಾರ ಸುರಕ್ಷತೆ ವಿಚಾರದಲ್ಲಿ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ. ಗೋಬಿ ಮಂಚೂರಿ ಸೇರಿದಂತೆ ಚೈನೀಸ್ ಐಟಂ ತಯಾರಿ ಕೇಂದ್ರಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದಿದೆ. ಇದರಿಂದ ಗ್ರಾಹಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಎಲ್ಲ ಕಡೆ ದಾಳಿ ನಡೆಸಬೇಕು. ಫುಡ್ ಸ್ಯಾಂಪಲನ್ನು ಪ್ರಯೋಗಾಲಯಕ್ಕೆ ಕಳುಹಿಸಿ, ಗುಣಮಟ್ಟ ಖಾತ್ರಿ ಮಾಡಬೇಕು. ಯಾವುದೇ ರೀತಿಯಲ್ಲಿ ಆಹಾರ ಗುಣಮಟ್ಟದಲ್ಲಿ ಕೊರತೆ ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.



ಅಲ್ಲದೆ, ಟೇಸ್ಟಿಂಗ್ ಪೌಡರನ್ನು ಪರವಾನಗಿ ಇಲ್ಲದೆ ಮಾರಾಟ ಮಾಡುವ ವ್ಯಾಪಾರಸ್ಥರ ಮೇಲೆಯೂ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಬೇಕರಿ ಇನ್ನಿತರ ಆಹಾರ ತಯಾರಿ ಕೇಂದ್ರಗಳಿಗೆ ಪ್ರತಿ ತಿಂಗಳು ದಾಳಿ ನಡೆಸಬೇಕು. ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ಬೇಕರಿ ತಿಂಡಿ, ತಿನಿಸುಗಳ ಪ್ಯಾಕೆಟ್ ಗಳಲ್ಲಿ ಬಳಕೆಯ ಅವಧಿ ಬಗ್ಗೆ ನಮೂದೆ ಮಾಡಲಾಗಿದೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಪ್ರತಿ ತಿಂಗಳು ಬೇಕರಿ ಇನ್ನಿತರ ಆಹಾರ ಸಾಮಗ್ರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿಗಳು ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಣ್ಣು, ತರಕಾರಿಗಳ ಕೆಮಿಕಲ್ ಬಳಕೆ ಮಾಡುವ ಬಗ್ಗೆಯೂ ನಿಗಾ ವಹಿಸಬೇಕು. ಬಾಳೆಹಣ್ಣು ಇನ್ನಿತರ ಹಣ್ಣುಗಳ ಹೋಲ್ ಸೇಲ್ ವ್ಯಾಪಾರಿಗಳು ಕೆಮಿಕಲ್ ಬಳಕೆ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು. ಅಂಥ ವ್ಯಾಪಾರಿಗಳ ವಿರುದ್ಧ ಕಟ್ಟಿನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.
ಸಭೆಯಲ್ಲಿ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್ ಉಪಸ್ಥಿತರಿದ್ದರು.
Deputy commissioner (DC) G Jagadeesha warned that a criminal case will be filed against food manufacturers if it is found that they are using excessive amounts of tasting powder in any kind of food manufacture.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm