ಬ್ರೇಕಿಂಗ್ ನ್ಯೂಸ್
27-08-21 03:10 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಆಹಾರ ತಯಾರಿ ಕೇಂದ್ರಗಳಲ್ಲಿ ಮಿತಿಗಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಕೆ ಮಾಡುವುದು ಪತ್ತೆಯಾದರೆ, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಆಹಾರ ಸುರಕ್ಷತೆ ವಿಚಾರದಲ್ಲಿ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ. ಗೋಬಿ ಮಂಚೂರಿ ಸೇರಿದಂತೆ ಚೈನೀಸ್ ಐಟಂ ತಯಾರಿ ಕೇಂದ್ರಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದಿದೆ. ಇದರಿಂದ ಗ್ರಾಹಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಎಲ್ಲ ಕಡೆ ದಾಳಿ ನಡೆಸಬೇಕು. ಫುಡ್ ಸ್ಯಾಂಪಲನ್ನು ಪ್ರಯೋಗಾಲಯಕ್ಕೆ ಕಳುಹಿಸಿ, ಗುಣಮಟ್ಟ ಖಾತ್ರಿ ಮಾಡಬೇಕು. ಯಾವುದೇ ರೀತಿಯಲ್ಲಿ ಆಹಾರ ಗುಣಮಟ್ಟದಲ್ಲಿ ಕೊರತೆ ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಅಲ್ಲದೆ, ಟೇಸ್ಟಿಂಗ್ ಪೌಡರನ್ನು ಪರವಾನಗಿ ಇಲ್ಲದೆ ಮಾರಾಟ ಮಾಡುವ ವ್ಯಾಪಾರಸ್ಥರ ಮೇಲೆಯೂ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಬೇಕರಿ ಇನ್ನಿತರ ಆಹಾರ ತಯಾರಿ ಕೇಂದ್ರಗಳಿಗೆ ಪ್ರತಿ ತಿಂಗಳು ದಾಳಿ ನಡೆಸಬೇಕು. ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ಬೇಕರಿ ತಿಂಡಿ, ತಿನಿಸುಗಳ ಪ್ಯಾಕೆಟ್ ಗಳಲ್ಲಿ ಬಳಕೆಯ ಅವಧಿ ಬಗ್ಗೆ ನಮೂದೆ ಮಾಡಲಾಗಿದೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಪ್ರತಿ ತಿಂಗಳು ಬೇಕರಿ ಇನ್ನಿತರ ಆಹಾರ ಸಾಮಗ್ರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿಗಳು ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಹಣ್ಣು, ತರಕಾರಿಗಳ ಕೆಮಿಕಲ್ ಬಳಕೆ ಮಾಡುವ ಬಗ್ಗೆಯೂ ನಿಗಾ ವಹಿಸಬೇಕು. ಬಾಳೆಹಣ್ಣು ಇನ್ನಿತರ ಹಣ್ಣುಗಳ ಹೋಲ್ ಸೇಲ್ ವ್ಯಾಪಾರಿಗಳು ಕೆಮಿಕಲ್ ಬಳಕೆ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು. ಅಂಥ ವ್ಯಾಪಾರಿಗಳ ವಿರುದ್ಧ ಕಟ್ಟಿನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.
ಸಭೆಯಲ್ಲಿ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್ ಉಪಸ್ಥಿತರಿದ್ದರು.
Deputy commissioner (DC) G Jagadeesha warned that a criminal case will be filed against food manufacturers if it is found that they are using excessive amounts of tasting powder in any kind of food manufacture.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm