ಬ್ರೇಕಿಂಗ್ ನ್ಯೂಸ್
28-08-21 11:15 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 28: ಈಗಿನ ಕೆಲವು ಯುವಕ- ಯುವತಿಯರಿಗೆ ಟಿಕ್ ಟಾಕ್ ವಿಡಿಯೋ ಮಾಡುವುದು ಟ್ರೆಂಡ್ ಆಗಿದೆ. ಆದರೆ, ಎಲ್ಲಿ ಯಾವುದನ್ನು ಮಾಡಬೇಕು ಎಂಬ ಅರಿವು ಇಲ್ಲದೆಯೋ, ಏನಾಗುತ್ತೆ ಎಂಬ ದಾರ್ಷ್ಟ್ಯವೋ ಸಿಕ್ಕಸಿಕ್ಕಲ್ಲಿ ಟಿಕ್ ಟಾಕ್ ಮಾಡಿ ಸಿಕ್ಕಿಬೀಳುತ್ತಾರೆ. ಹಳೆಯಂಗಡಿ ಪ್ರಸಿದ್ಧ ಪಾವಂಜೆ ದೇವಸ್ಥಾನದಲ್ಲಿ ಇಬ್ಬರು ಹುಡುಗಿಯರ ಜೊತೆ ಯುವಕನೊಬ್ಬ ಟಿಕ್ ಟಾಕ್ ವಿಡಿಯೋ ಮಾಡಿದ್ದು ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮೂಲ್ಕಿ ನಿವಾಸಿ ಪ್ರತೀಕ್ ಶೆಟ್ಟಿ ಎಂಬಾತ ತನ್ನೊಂದಿಗೆ ಇಬ್ಬರು ಹುಡುಗಿಯರ ಜೊತೆ ವಿಡಿಯೋ ಮಾಡಿದ್ದಾನೆ. ದೇವಸ್ಥಾನದ ಒಳಗಿನ ಅಂಗಣದಲ್ಲಿ ವಿಡಿಯೋ ಮಾಡಿರುವಂತಿದೆ. ನಾಲ್ಕು ಮಾದರಿಯ ಬೇರೆ ಬೇರೆ ವಿಡಿಯೋಗಳು ವೈರಲ್ ಆಗಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪಾವಂಜೆ ಮಹಾಲಿಂಗೇಶ್ವರ ಗಣಪತಿ ದೇವಸ್ಥಾನದಲ್ಲಿ ಈ ರೀತಿ ವಿಡಿಯೋ ಮಾಡಲಾಗಿದೆ ಎನ್ನಲಾಗುತ್ತಿದ್ದು ಸ್ಥಳೀಯ ಭಕ್ತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯೊಬ್ಬ ಯುವಕನಿಗೆ ಫೋನ್ ಮಾಡಿ, ಇನ್ಮುಂದೆ ದೇವಸ್ಥಾನಕ್ಕೆ ಕಾಲಿಟ್ಟಲ್ಲಿ ನಿನ್ನ ಕೈಕಾಲು ಮುರಿಯುತ್ತೇವೆ ಎಂದು ಧಮಕಿ ಹಾಕಿದ್ದಾನೆ. ನಾವು ಕೈಮುಗಿಯುವ ಜಾಗದಲ್ಲಿ ನೀನು ಈ ರೀತಿ ವಿಡಿಯೋ ಮಾಡಿದ್ದೀಯಲ್ಲಾ. ನಿನಗೆ ಯಾರು ಅವಕಾಶ ಕೊಟ್ಟಿದ್ದು ಎಂದು ಕೇಳಿದ್ದಾರೆ. ಅಲ್ಲಿನ ಅರ್ಚಕ ಭಟ್ರಿಗೆ ಹೇಳಿ, ಮಾಡಿದ್ದೇವೆ ಎಂದಿದ್ದಾನೆ. ಯಾರು ಆತ ಭಟ್ಟ, ನಿನಗೆ ಈ ರೀತಿ ವಿಡಿಯೋ ಮಾಡಲು ಹೇಳಿದ್ದು. ಬಾ, ದೇವಸ್ಥಾನಕ್ಕೆ ಬಂದು ಹೇಳು.. ನಾನು ವಿಡಿಯೋ ಡಿಲೀಟ್ ಮಾಡಿದ್ದೇನೆ ಎಂದು ಹುಡುಗ ಹೇಳಿದ್ದಕ್ಕೆ, ಅದು ಎಲ್ಲಾ ಗ್ರೂಪುಗಳಲ್ಲಿ ಬರ್ತಿದೆ. ನೀನು ಡಿಲೀಟ್ ಮಾಡೋದೇನು.. ನಿನ್ನ ಕೈಕಾಲು ತೆಗೀತೇನೆ ಎಂದು ಧಮ್ಕಿ ಹಾಕುವ ಆಡಿಯೋ ಕೂಡ ವೈರಲ್ ಆಗಿದ್ದು ಯುವಕನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ.
ಇದೇ ವೇಳೆ, ದೇವಸ್ಥಾನದ ವತಿಯಿಂದ ತಪ್ಪಿತಸ್ಥ ಯುವಕ ಮತ್ತು ಹುಡುಗಿಯರು ದೇವಸ್ಥಾನಕ್ಕೆ ಬಂದು ಕ್ಷಮೆ ಕೇಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಹುಡುಗ- ಹುಡುಗಿಯರ ಹುಚ್ಚಾಟಕ್ಕೆ ದೇವಸ್ಥಾನದ ಮರ್ಯಾದೆ ಹರಾಜು ಆಗುವಂತಾಗಿದೆ.
Video:
Mangalore Tiktok vidoe inside Pavanje temple haleangadi goes viral. Boy from Mulki and girls were seen acting inappropriately shooting their videos for Tiktok.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm