ಬ್ರೇಕಿಂಗ್ ನ್ಯೂಸ್
28-08-21 11:15 am Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 28: ಈಗಿನ ಕೆಲವು ಯುವಕ- ಯುವತಿಯರಿಗೆ ಟಿಕ್ ಟಾಕ್ ವಿಡಿಯೋ ಮಾಡುವುದು ಟ್ರೆಂಡ್ ಆಗಿದೆ. ಆದರೆ, ಎಲ್ಲಿ ಯಾವುದನ್ನು ಮಾಡಬೇಕು ಎಂಬ ಅರಿವು ಇಲ್ಲದೆಯೋ, ಏನಾಗುತ್ತೆ ಎಂಬ ದಾರ್ಷ್ಟ್ಯವೋ ಸಿಕ್ಕಸಿಕ್ಕಲ್ಲಿ ಟಿಕ್ ಟಾಕ್ ಮಾಡಿ ಸಿಕ್ಕಿಬೀಳುತ್ತಾರೆ. ಹಳೆಯಂಗಡಿ ಪ್ರಸಿದ್ಧ ಪಾವಂಜೆ ದೇವಸ್ಥಾನದಲ್ಲಿ ಇಬ್ಬರು ಹುಡುಗಿಯರ ಜೊತೆ ಯುವಕನೊಬ್ಬ ಟಿಕ್ ಟಾಕ್ ವಿಡಿಯೋ ಮಾಡಿದ್ದು ಈಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮೂಲ್ಕಿ ನಿವಾಸಿ ಪ್ರತೀಕ್ ಶೆಟ್ಟಿ ಎಂಬಾತ ತನ್ನೊಂದಿಗೆ ಇಬ್ಬರು ಹುಡುಗಿಯರ ಜೊತೆ ವಿಡಿಯೋ ಮಾಡಿದ್ದಾನೆ. ದೇವಸ್ಥಾನದ ಒಳಗಿನ ಅಂಗಣದಲ್ಲಿ ವಿಡಿಯೋ ಮಾಡಿರುವಂತಿದೆ. ನಾಲ್ಕು ಮಾದರಿಯ ಬೇರೆ ಬೇರೆ ವಿಡಿಯೋಗಳು ವೈರಲ್ ಆಗಿದ್ದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪಾವಂಜೆ ಮಹಾಲಿಂಗೇಶ್ವರ ಗಣಪತಿ ದೇವಸ್ಥಾನದಲ್ಲಿ ಈ ರೀತಿ ವಿಡಿಯೋ ಮಾಡಲಾಗಿದೆ ಎನ್ನಲಾಗುತ್ತಿದ್ದು ಸ್ಥಳೀಯ ಭಕ್ತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಕ್ತಿಯೊಬ್ಬ ಯುವಕನಿಗೆ ಫೋನ್ ಮಾಡಿ, ಇನ್ಮುಂದೆ ದೇವಸ್ಥಾನಕ್ಕೆ ಕಾಲಿಟ್ಟಲ್ಲಿ ನಿನ್ನ ಕೈಕಾಲು ಮುರಿಯುತ್ತೇವೆ ಎಂದು ಧಮಕಿ ಹಾಕಿದ್ದಾನೆ. ನಾವು ಕೈಮುಗಿಯುವ ಜಾಗದಲ್ಲಿ ನೀನು ಈ ರೀತಿ ವಿಡಿಯೋ ಮಾಡಿದ್ದೀಯಲ್ಲಾ. ನಿನಗೆ ಯಾರು ಅವಕಾಶ ಕೊಟ್ಟಿದ್ದು ಎಂದು ಕೇಳಿದ್ದಾರೆ. ಅಲ್ಲಿನ ಅರ್ಚಕ ಭಟ್ರಿಗೆ ಹೇಳಿ, ಮಾಡಿದ್ದೇವೆ ಎಂದಿದ್ದಾನೆ. ಯಾರು ಆತ ಭಟ್ಟ, ನಿನಗೆ ಈ ರೀತಿ ವಿಡಿಯೋ ಮಾಡಲು ಹೇಳಿದ್ದು. ಬಾ, ದೇವಸ್ಥಾನಕ್ಕೆ ಬಂದು ಹೇಳು.. ನಾನು ವಿಡಿಯೋ ಡಿಲೀಟ್ ಮಾಡಿದ್ದೇನೆ ಎಂದು ಹುಡುಗ ಹೇಳಿದ್ದಕ್ಕೆ, ಅದು ಎಲ್ಲಾ ಗ್ರೂಪುಗಳಲ್ಲಿ ಬರ್ತಿದೆ. ನೀನು ಡಿಲೀಟ್ ಮಾಡೋದೇನು.. ನಿನ್ನ ಕೈಕಾಲು ತೆಗೀತೇನೆ ಎಂದು ಧಮ್ಕಿ ಹಾಕುವ ಆಡಿಯೋ ಕೂಡ ವೈರಲ್ ಆಗಿದ್ದು ಯುವಕನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ.
ಇದೇ ವೇಳೆ, ದೇವಸ್ಥಾನದ ವತಿಯಿಂದ ತಪ್ಪಿತಸ್ಥ ಯುವಕ ಮತ್ತು ಹುಡುಗಿಯರು ದೇವಸ್ಥಾನಕ್ಕೆ ಬಂದು ಕ್ಷಮೆ ಕೇಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಹುಡುಗ- ಹುಡುಗಿಯರ ಹುಚ್ಚಾಟಕ್ಕೆ ದೇವಸ್ಥಾನದ ಮರ್ಯಾದೆ ಹರಾಜು ಆಗುವಂತಾಗಿದೆ.
Video:
Mangalore Tiktok vidoe inside Pavanje temple haleangadi goes viral. Boy from Mulki and girls were seen acting inappropriately shooting their videos for Tiktok.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm