ಬ್ರೇಕಿಂಗ್ ನ್ಯೂಸ್
28-08-21 07:47 pm Mangaluru Correspondent ಕರಾವಳಿ
ಉಳ್ಳಾಲ, ಆ.28: ಮೀನಿಗೆ ಹಾಕಿದ ಬಲೆ ಎಳೆಯುತ್ತಿದ್ದ ವೇಳೆ ನಾಡದೋಣಿಯಿಂದ ಬಿದ್ದು ಸಮುದ್ರಪಾಲಾಗಿದ್ದ ಮೀನುಗಾರನನ್ನು ಮತ್ತೊಂದು ನಾಡದೋಣಿಯ ಮೀನುಗಾರರು ರಕ್ಷಿಸಿದ ಘಟನೆ ಉಳ್ಳಾಲದ ಅಳಿವೆಬಾಗಿಲಿನಲ್ಲಿ ನಡೆದಿದೆ.
ಕಸಬಾ ಬೆಂಗ್ರೆಯ ನಾಡದೋಣಿ ಇಂದು ಮಧ್ಯಾಹ್ನ ಅಳಿವೆಬಾಗಿಲಿನಲ್ಲಿ ಹಿಂತಿರುಗುತ್ತಿದ್ದಾಗ ಮೀನಿಗೆ ಹಾಕಿದ್ದ ಬಲೆಯನ್ನು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದೋಣಿಯ ಇಂಜಿನ್ ಕೆಟ್ಟು ನಿಂತಿದ್ದು ಇದೇ ಸಂದರ್ಭದಲ್ಲಿ ದೋಣಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಕಸಬ ಬೆಂಗ್ರೆ ನಿವಾಸಿ ನವಾಝ್(35) ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ.


ನವಾಝ್ ಅವರು ಅಳಿವೆ ಬಾಗಿಲಿನ ರಣಭಯಂಕರ ಸಮುದ್ರದಲ್ಲಿ ಸುಮಾರು ಅರ್ಧ ತಾಸಿನಷ್ಟು ಕಾಲ ಥರ್ಮಾಕೋಲಿನ ಸಹಾಯದಿಂದ ಈಜಾಡಿದ್ದಾರೆ. ಈ ವೇಳೆ ಅದೇ ದಾರಿಯಿಂದ ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ಉಳ್ಳಾಲ ಹೊಯ್ಗೆಯ ನಿಶಾನ್ ಜಾಯ್ ಮಾಲಕತ್ವದ ಓಶಿಯನ್ ಬ್ರೀಝ್ ನಾಡದೋಣಿಯ ಮೀನುಗಾರರು ಸಮುದ್ರದಲ್ಲಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ನವಾಝ್ ನನ್ನು ಗಮನಿಸಿದ್ದು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ದೋಣಿಯಲ್ಲಿದ್ದ ಹೊಯ್ಗೆ ನಿವಾಸಿ ಪ್ರೇಮ್ ಪ್ರಕಾಶ್, ಸೂರ್ಯಪ್ರಕಾಶ್, ಅನಿಲ್ ಮೊಂತೇರೊ, ಅಜಿತ್ ಬೆಂಗರೆ, ರಿತೇಶ್ ಹೊಯ್ಗೆ ಬಝಾರ್ ಜೊತೆಗೂಡಿ ನವಾಝ್ ಅವರಿಗೆ ರೋಪ್ ಎಸೆದು ದೋಣಿಯೊಳಗೆ ಎಳೆತಂದು ರಕ್ಷಿಸಿದ್ದಾರೆ.
ರಕ್ಷಣೆಗೊಳಗಾದ ಕಸಬಾ ಬೆಂಗ್ರೆ ನಿವಾಸಿ ನವಾಝ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ.
Mangalore fisherman falls overboard survives in sea for hours rescued in Ullal.
02-04-26 09:31 pm
HK News Staffer
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
ಸಂಸದ ರಾಘವ್ ಚಡ್ಡಾಗೆ ಆಪ್ ಶಾಕ್; ರಾಜ್ಯಸಭೆ ಉಪ ನಾಯಕ...
02-04-26 07:44 pm
ಆಟವಾಡುತ್ತಿದ್ದ ಮಗು ನೀರಿನ ಬಕೆಟ್ಗೆ ಬಿದ್ದು ಸಾವು;...
02-04-26 03:56 pm
02-04-26 10:24 pm
HK News Staffer
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
02-04-26 02:43 pm
HK News Staffer
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm