ಬ್ರೇಕಿಂಗ್ ನ್ಯೂಸ್
28-08-21 07:47 pm Mangaluru Correspondent ಕರಾವಳಿ
ಉಳ್ಳಾಲ, ಆ.28: ಮೀನಿಗೆ ಹಾಕಿದ ಬಲೆ ಎಳೆಯುತ್ತಿದ್ದ ವೇಳೆ ನಾಡದೋಣಿಯಿಂದ ಬಿದ್ದು ಸಮುದ್ರಪಾಲಾಗಿದ್ದ ಮೀನುಗಾರನನ್ನು ಮತ್ತೊಂದು ನಾಡದೋಣಿಯ ಮೀನುಗಾರರು ರಕ್ಷಿಸಿದ ಘಟನೆ ಉಳ್ಳಾಲದ ಅಳಿವೆಬಾಗಿಲಿನಲ್ಲಿ ನಡೆದಿದೆ.
ಕಸಬಾ ಬೆಂಗ್ರೆಯ ನಾಡದೋಣಿ ಇಂದು ಮಧ್ಯಾಹ್ನ ಅಳಿವೆಬಾಗಿಲಿನಲ್ಲಿ ಹಿಂತಿರುಗುತ್ತಿದ್ದಾಗ ಮೀನಿಗೆ ಹಾಕಿದ್ದ ಬಲೆಯನ್ನು ಎಳೆಯಲು ಯತ್ನಿಸಿದ್ದಾರೆ. ಈ ವೇಳೆ ದೋಣಿಯ ಇಂಜಿನ್ ಕೆಟ್ಟು ನಿಂತಿದ್ದು ಇದೇ ಸಂದರ್ಭದಲ್ಲಿ ದೋಣಿಗೆ ಭಾರೀ ಗಾತ್ರದ ಅಲೆಗಳು ಅಪ್ಪಳಿಸಿದ ಪರಿಣಾಮ ದೋಣಿಯಲ್ಲಿದ್ದ ಕಸಬ ಬೆಂಗ್ರೆ ನಿವಾಸಿ ನವಾಝ್(35) ಸಮುದ್ರಕ್ಕೆ ಎಸೆಯಲ್ಪಟ್ಟಿದ್ದಾರೆ.
ನವಾಝ್ ಅವರು ಅಳಿವೆ ಬಾಗಿಲಿನ ರಣಭಯಂಕರ ಸಮುದ್ರದಲ್ಲಿ ಸುಮಾರು ಅರ್ಧ ತಾಸಿನಷ್ಟು ಕಾಲ ಥರ್ಮಾಕೋಲಿನ ಸಹಾಯದಿಂದ ಈಜಾಡಿದ್ದಾರೆ. ಈ ವೇಳೆ ಅದೇ ದಾರಿಯಿಂದ ಮೀನುಗಾರಿಕೆ ಮುಗಿಸಿ ಹಿಂತಿರುಗುತ್ತಿದ್ದ ಉಳ್ಳಾಲ ಹೊಯ್ಗೆಯ ನಿಶಾನ್ ಜಾಯ್ ಮಾಲಕತ್ವದ ಓಶಿಯನ್ ಬ್ರೀಝ್ ನಾಡದೋಣಿಯ ಮೀನುಗಾರರು ಸಮುದ್ರದಲ್ಲಿ ಪ್ರಾಣ ರಕ್ಷಣೆಗಾಗಿ ಒದ್ದಾಡುತ್ತಿದ್ದ ನವಾಝ್ ನನ್ನು ಗಮನಿಸಿದ್ದು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ. ದೋಣಿಯಲ್ಲಿದ್ದ ಹೊಯ್ಗೆ ನಿವಾಸಿ ಪ್ರೇಮ್ ಪ್ರಕಾಶ್, ಸೂರ್ಯಪ್ರಕಾಶ್, ಅನಿಲ್ ಮೊಂತೇರೊ, ಅಜಿತ್ ಬೆಂಗರೆ, ರಿತೇಶ್ ಹೊಯ್ಗೆ ಬಝಾರ್ ಜೊತೆಗೂಡಿ ನವಾಝ್ ಅವರಿಗೆ ರೋಪ್ ಎಸೆದು ದೋಣಿಯೊಳಗೆ ಎಳೆತಂದು ರಕ್ಷಿಸಿದ್ದಾರೆ.
ರಕ್ಷಣೆಗೊಳಗಾದ ಕಸಬಾ ಬೆಂಗ್ರೆ ನಿವಾಸಿ ನವಾಝ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು ಚೇತರಿಸಿಕೊಂಡಿದ್ದಾರೆ.
Mangalore fisherman falls overboard survives in sea for hours rescued in Ullal.
04-02-25 03:09 pm
Bangalore Correspondent
Cow theft, Mankal Vaidya: ಇನ್ಮುಂದೆ ಗೋಹತ್ಯೆ ನಡ...
04-02-25 12:59 pm
Mandya Car Canal Accident, Hassan Drowning: ಮ...
03-02-25 10:38 pm
BY Vijayendra: ನಾನೇ ಮತ್ತೆ ಅಧ್ಯಕ್ಷನಾಗುತ್ತೇನೆ,...
03-02-25 08:36 pm
ಸಿದ್ದರಾಮಯ್ಯ ಬೇನಾಮಿ ಹೆಸರಲ್ಲಿ ಅಕ್ರಮ ಆಸ್ತಿ ಮಾಡಿದ...
03-02-25 08:20 pm
04-02-25 05:34 pm
HK News Desk
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
ಎರ್ನಾಕುಲಂ ಜಿಲ್ಲೆಯಲ್ಲಿ ಒಂದೇ ದಿನ 27 ಬಾಂಗ್ಲಾ ದೇಶ...
01-02-25 09:35 pm
03-02-25 07:38 pm
Mangalore Correspondent
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
Kotekar Bank Robbery, Shashi Tevar, update: ಬ...
02-02-25 05:02 pm
Air India Express, Mangalore Delhi flight: ಮಂ...
01-02-25 07:47 pm
Kotekar Bank Robbery, Murgan D Devar: ಕೋಟೆಕಾರ...
01-02-25 02:32 pm
03-02-25 05:46 pm
Mangalore Correspondent
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am
Mangalore court, Rape, Crime: 15 ವರ್ಷದ ಬಾಲಕಿ...
30-01-25 11:37 am