ಬ್ರೇಕಿಂಗ್ ನ್ಯೂಸ್
29-08-21 03:49 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 29: ವಯಸ್ಸು ಶತಕದ ಹತ್ತಿರ ಇದ್ದರೂ ಟ್ರಾಫಿಕ್ ವಾರ್ಡನ್ ಚೀಫ್ ಆಗಿ ಯುವಕರು ನಾಚಿಸುವ ರೀತಿ ಸಮಾಜ ಸೇವೆಯಲ್ಲಿ ನಿರತರಾಗಿದ್ದ ಜೋಸೆಫ್ ಗೊನ್ಸಾಲ್ವಿಸ್ ತಮ್ಮ 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ್ದಾರೆ. ಕೆಲ ದಿನಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋನ್ಸಾಲ್ವಿಸ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಜೋ ಗೊನ್ಸಾಲ್ವಿಸ್ ಎಂದೇ ಹೆಸರಾಗಿದ್ದ ಅವರು, ಮಂಗಳೂರು ನಗರದ ಫಳ್ನೀರ್ ನಲ್ಲಿ ವಾಸವಿದ್ದರು. ಮೊದಲಿಗೆ ಬ್ರಿಟಿಷ್ ಮೂಲದ ಜೆಎಲ್ ಮೋರಿಸನ್ ಕಂಪನಿಯಲ್ಲಿ ಮ್ಯಾನೇಜ್ಮೆಂಟ್ ಟ್ರೈನೀ ಆಗಿ ಉದ್ಯೋಗಕ್ಕೆ ಸೇರಿದ್ದ ಜೋ ಬಳಿಕ ಅದೇ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರು. ಕೊನೆಗೆ, ಕಂಪನಿಯಲ್ಲಿ ಭಡ್ತಿ ಪಡೆದು ಎಕ್ಸಿಕ್ಯುಟಿವ್ ಡೈರೆಕ್ಟರ್ ಹುದ್ದೆಗೇರಿದ್ದರು. ಆ ಸಂದರ್ಭದಲ್ಲಿ ಲಂಡನ್ ನಗರದಲ್ಲೇ ಜೋ ಗೊನ್ಸಾಲ್ವಿಸ್ ನೆಲೆಯಾಗಿದ್ದರು.

ಕಂಪನಿ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಶಿಕ್ಷಣ ಸಂಸ್ಥೆಗಳು ಮತ್ತು ಚಾರಿಟಿ ಸಂಸ್ಥೆಗಳಲ್ಲಿ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಉತ್ತರ ಅಮೆರಿಕಾದಲ್ಲಿ ಮಂಗಳೂರಿನ ಸೈಂಟ್ ಅಲೋಸಿಯಸ್ ಅಲ್ಯುಮ್ನಿ ಅಸೋಸಿಯೇಶನ್ ಹೆಸರಲ್ಲಿ ಸಂಘಟನೆಯ ಸ್ಥಾಪಕರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರಿನಲ್ಲಿದ್ದ ವೇಳೆ ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿ, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಅದರಂತೆ, 2015ರಲ್ಲಿ ಟ್ರಾಫಿಕ್ ವಾರ್ಡನ್ ಸೇವೆ ಆರಂಭಿಸಿದ್ದಲ್ಲದೆ ತಮ್ಮ 94ರ ವಯಸ್ಸಿನಲ್ಲಿ ಚೀಫ್ ವಾರ್ಡನ್ ಆಗಿ ಸೇವೆ ಆರಂಭಿಸಿದ್ದರು.
ನಿಯಮಿತ ಯೋಗ ಅಭ್ಯಾಸ ಮಾಡುತ್ತಾ ಬಂದಿದ್ದರಿಂದ ದೈಹಿಕವಾಗಿ ಸದೃಢರಾಗಿದ್ದರು. ವಯಸ್ಸಾದವರು ಯಾವ ರೀತಿ ದೈಹಿಕ ಆರೋಗ್ಯ ಬೆಳೆಸಿಕೊಳ್ಳಬೇಕು ಎನ್ನುವ ಬಗ್ಗೆ ಆಸಕ್ತರಿಗೆ ತರಬೇತಿ ಟಿಪ್ಸ್ ನೀಡುತ್ತಿದ್ದರು. ತನ್ನ ಉತ್ತಮ ಆರೋಗ್ಯದಿಂದಾಗಿ ಕೊನೆಯ ವರೆಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಜೋ ಗೊನ್ಸಾಲ್ವಿಸ್ ವಿಶೇಷ.
Well-known traffic warden chief Joseph Gonsalves, who had inspired a generation of Mangalureans with his social work and sense of public duty, passed away on Sunday August 29. He was 99.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm