ಬ್ರೇಕಿಂಗ್ ನ್ಯೂಸ್
29-08-21 03:49 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 29: ವಯಸ್ಸು ಶತಕದ ಹತ್ತಿರ ಇದ್ದರೂ ಟ್ರಾಫಿಕ್ ವಾರ್ಡನ್ ಚೀಫ್ ಆಗಿ ಯುವಕರು ನಾಚಿಸುವ ರೀತಿ ಸಮಾಜ ಸೇವೆಯಲ್ಲಿ ನಿರತರಾಗಿದ್ದ ಜೋಸೆಫ್ ಗೊನ್ಸಾಲ್ವಿಸ್ ತಮ್ಮ 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ್ದಾರೆ. ಕೆಲ ದಿನಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋನ್ಸಾಲ್ವಿಸ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಜೋ ಗೊನ್ಸಾಲ್ವಿಸ್ ಎಂದೇ ಹೆಸರಾಗಿದ್ದ ಅವರು, ಮಂಗಳೂರು ನಗರದ ಫಳ್ನೀರ್ ನಲ್ಲಿ ವಾಸವಿದ್ದರು. ಮೊದಲಿಗೆ ಬ್ರಿಟಿಷ್ ಮೂಲದ ಜೆಎಲ್ ಮೋರಿಸನ್ ಕಂಪನಿಯಲ್ಲಿ ಮ್ಯಾನೇಜ್ಮೆಂಟ್ ಟ್ರೈನೀ ಆಗಿ ಉದ್ಯೋಗಕ್ಕೆ ಸೇರಿದ್ದ ಜೋ ಬಳಿಕ ಅದೇ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರು. ಕೊನೆಗೆ, ಕಂಪನಿಯಲ್ಲಿ ಭಡ್ತಿ ಪಡೆದು ಎಕ್ಸಿಕ್ಯುಟಿವ್ ಡೈರೆಕ್ಟರ್ ಹುದ್ದೆಗೇರಿದ್ದರು. ಆ ಸಂದರ್ಭದಲ್ಲಿ ಲಂಡನ್ ನಗರದಲ್ಲೇ ಜೋ ಗೊನ್ಸಾಲ್ವಿಸ್ ನೆಲೆಯಾಗಿದ್ದರು.
ಕಂಪನಿ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಶಿಕ್ಷಣ ಸಂಸ್ಥೆಗಳು ಮತ್ತು ಚಾರಿಟಿ ಸಂಸ್ಥೆಗಳಲ್ಲಿ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಉತ್ತರ ಅಮೆರಿಕಾದಲ್ಲಿ ಮಂಗಳೂರಿನ ಸೈಂಟ್ ಅಲೋಸಿಯಸ್ ಅಲ್ಯುಮ್ನಿ ಅಸೋಸಿಯೇಶನ್ ಹೆಸರಲ್ಲಿ ಸಂಘಟನೆಯ ಸ್ಥಾಪಕರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರಿನಲ್ಲಿದ್ದ ವೇಳೆ ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿ, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಅದರಂತೆ, 2015ರಲ್ಲಿ ಟ್ರಾಫಿಕ್ ವಾರ್ಡನ್ ಸೇವೆ ಆರಂಭಿಸಿದ್ದಲ್ಲದೆ ತಮ್ಮ 94ರ ವಯಸ್ಸಿನಲ್ಲಿ ಚೀಫ್ ವಾರ್ಡನ್ ಆಗಿ ಸೇವೆ ಆರಂಭಿಸಿದ್ದರು.
ನಿಯಮಿತ ಯೋಗ ಅಭ್ಯಾಸ ಮಾಡುತ್ತಾ ಬಂದಿದ್ದರಿಂದ ದೈಹಿಕವಾಗಿ ಸದೃಢರಾಗಿದ್ದರು. ವಯಸ್ಸಾದವರು ಯಾವ ರೀತಿ ದೈಹಿಕ ಆರೋಗ್ಯ ಬೆಳೆಸಿಕೊಳ್ಳಬೇಕು ಎನ್ನುವ ಬಗ್ಗೆ ಆಸಕ್ತರಿಗೆ ತರಬೇತಿ ಟಿಪ್ಸ್ ನೀಡುತ್ತಿದ್ದರು. ತನ್ನ ಉತ್ತಮ ಆರೋಗ್ಯದಿಂದಾಗಿ ಕೊನೆಯ ವರೆಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಜೋ ಗೊನ್ಸಾಲ್ವಿಸ್ ವಿಶೇಷ.
Well-known traffic warden chief Joseph Gonsalves, who had inspired a generation of Mangalureans with his social work and sense of public duty, passed away on Sunday August 29. He was 99.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm