ಬ್ರೇಕಿಂಗ್ ನ್ಯೂಸ್
29-08-21 03:49 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 29: ವಯಸ್ಸು ಶತಕದ ಹತ್ತಿರ ಇದ್ದರೂ ಟ್ರಾಫಿಕ್ ವಾರ್ಡನ್ ಚೀಫ್ ಆಗಿ ಯುವಕರು ನಾಚಿಸುವ ರೀತಿ ಸಮಾಜ ಸೇವೆಯಲ್ಲಿ ನಿರತರಾಗಿದ್ದ ಜೋಸೆಫ್ ಗೊನ್ಸಾಲ್ವಿಸ್ ತಮ್ಮ 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ್ದಾರೆ. ಕೆಲ ದಿನಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋನ್ಸಾಲ್ವಿಸ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಜೋ ಗೊನ್ಸಾಲ್ವಿಸ್ ಎಂದೇ ಹೆಸರಾಗಿದ್ದ ಅವರು, ಮಂಗಳೂರು ನಗರದ ಫಳ್ನೀರ್ ನಲ್ಲಿ ವಾಸವಿದ್ದರು. ಮೊದಲಿಗೆ ಬ್ರಿಟಿಷ್ ಮೂಲದ ಜೆಎಲ್ ಮೋರಿಸನ್ ಕಂಪನಿಯಲ್ಲಿ ಮ್ಯಾನೇಜ್ಮೆಂಟ್ ಟ್ರೈನೀ ಆಗಿ ಉದ್ಯೋಗಕ್ಕೆ ಸೇರಿದ್ದ ಜೋ ಬಳಿಕ ಅದೇ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರು. ಕೊನೆಗೆ, ಕಂಪನಿಯಲ್ಲಿ ಭಡ್ತಿ ಪಡೆದು ಎಕ್ಸಿಕ್ಯುಟಿವ್ ಡೈರೆಕ್ಟರ್ ಹುದ್ದೆಗೇರಿದ್ದರು. ಆ ಸಂದರ್ಭದಲ್ಲಿ ಲಂಡನ್ ನಗರದಲ್ಲೇ ಜೋ ಗೊನ್ಸಾಲ್ವಿಸ್ ನೆಲೆಯಾಗಿದ್ದರು.

ಕಂಪನಿ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಶಿಕ್ಷಣ ಸಂಸ್ಥೆಗಳು ಮತ್ತು ಚಾರಿಟಿ ಸಂಸ್ಥೆಗಳಲ್ಲಿ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಉತ್ತರ ಅಮೆರಿಕಾದಲ್ಲಿ ಮಂಗಳೂರಿನ ಸೈಂಟ್ ಅಲೋಸಿಯಸ್ ಅಲ್ಯುಮ್ನಿ ಅಸೋಸಿಯೇಶನ್ ಹೆಸರಲ್ಲಿ ಸಂಘಟನೆಯ ಸ್ಥಾಪಕರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರಿನಲ್ಲಿದ್ದ ವೇಳೆ ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿ, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಅದರಂತೆ, 2015ರಲ್ಲಿ ಟ್ರಾಫಿಕ್ ವಾರ್ಡನ್ ಸೇವೆ ಆರಂಭಿಸಿದ್ದಲ್ಲದೆ ತಮ್ಮ 94ರ ವಯಸ್ಸಿನಲ್ಲಿ ಚೀಫ್ ವಾರ್ಡನ್ ಆಗಿ ಸೇವೆ ಆರಂಭಿಸಿದ್ದರು.
ನಿಯಮಿತ ಯೋಗ ಅಭ್ಯಾಸ ಮಾಡುತ್ತಾ ಬಂದಿದ್ದರಿಂದ ದೈಹಿಕವಾಗಿ ಸದೃಢರಾಗಿದ್ದರು. ವಯಸ್ಸಾದವರು ಯಾವ ರೀತಿ ದೈಹಿಕ ಆರೋಗ್ಯ ಬೆಳೆಸಿಕೊಳ್ಳಬೇಕು ಎನ್ನುವ ಬಗ್ಗೆ ಆಸಕ್ತರಿಗೆ ತರಬೇತಿ ಟಿಪ್ಸ್ ನೀಡುತ್ತಿದ್ದರು. ತನ್ನ ಉತ್ತಮ ಆರೋಗ್ಯದಿಂದಾಗಿ ಕೊನೆಯ ವರೆಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಜೋ ಗೊನ್ಸಾಲ್ವಿಸ್ ವಿಶೇಷ.
Well-known traffic warden chief Joseph Gonsalves, who had inspired a generation of Mangalureans with his social work and sense of public duty, passed away on Sunday August 29. He was 99.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm