ಬ್ರೇಕಿಂಗ್ ನ್ಯೂಸ್
30-08-21 04:35 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೊರೊನಾ ಕಾರಣಕ್ಕೆ ಹೆಚ್ಚು ಜನರು ಒಂದೇ ಕಡೆ ಸೇರುವುದಕ್ಕೆ ಅವಕಾಶವಿಲ್ಲ. ಆದರೆ, ಒಂದು ಜಾಗದಲ್ಲಿ ಸೇರುವ ಬದಲು ಏಕಕಾಲದಲ್ಲಿ ಜಗತ್ತಿನಾದ್ಯಂತ ಇರುವ ಸಾವಿರಾರು ಆಸಕ್ತರನ್ನು ಒಂದೇ ಕಡೆ ಸೇರಿಸಿ ಸಂವಾದಿಸಬಲ್ಲ ಡಿಜಿಟಲ್ ವೇದಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಅಂಥವುಗಳಲ್ಲಿ ವಾಟ್ಸಪ್, ಫೇಸ್ಬುಕ್ ಬಳಿಕ ಜನರನ್ನು ಹೆಚ್ಚು ಆಕರ್ಷಿಸಿದ್ದು ಕ್ಲಬ್ ಹೌಸ್.
ಹೊಸ ವಿಷ್ಯ ಏನಪ್ಪಾಂದ್ರೆ, ಕರಾವಳಿಯಲ್ಲಿ ಆಗಿಂದಾಗ್ಗೆ ಆಗುತ್ತಿದ್ದ ಹಿಂದು ಸಮಾವೇಶಗಳೂ ಈಗ ಈ ರೀತಿಯ ಡಿಜಿಟಲ್ ಪರದೆಗಳಲ್ಲಿ ಆರಂಭಗೊಂಡಿದೆ. ಮೊಟ್ಟಮೊದಲ ಬಾರಿಗೆ ಆಗಸ್ಟ್ 30ರಂದು ಹೊಸ ರೀತಿಯಲ್ಲಿ ಹಿಂದು ಸಮಾವೇಶ ಆಯೋಜನೆಗೊಂಡಿದ್ದು, ಪ್ರಖರ ಭಾಷಣಕಾರ ಎಂದು ಹೆಸರು ಪಡೆದಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇಂದು ಸಂಜೆ 7.30ಕ್ಕೆ ಕ್ಲಬ್ ಹೌಸ್ ನ ಹಿಂದುತ್ವ ಎನ್ನುವ ಪೇಜ್ ನಲ್ಲಿ ಹಿಂದು ಸಮಾವೇಶ ನಡೆಯಲಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಒಂದೆಡೆ ಸೇರಲಿದ್ದಾರೆ. ಮೊದಲ ಬಾರಿಗೆ ಈ ರೀತಿಯ ವೇದಿಕೆಯಲ್ಲಿ ಹಿಂದು ಸಮಾವೇಶ ನಡೆಯುತ್ತಿದ್ದು, ಕಲ್ಲಡ್ಕ ಪ್ರಭಾಕರ ಭಟ್ಟರ ಜೊತೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಲೇಖಕ ರೋಹಿತ್ ಚಕ್ರತೀರ್ಥ ನಡೆಸಲಿದ್ದಾರೆ. ಖ್ಯಾತ ಗಾಯಕಿ ರಮ್ಯ ವಸಿಷ್ಠ ಪ್ರಾರ್ಥನೆ ಮತ್ತು ವಂದೇ ಮಾತರಂ ಹಾಡಲಿದ್ದಾರೆ.
ಅಂದಹಾಗೆ, ಹಿಂದುತ್ವ ಪರ ಘೋಷಣೆಗಳು, ಯುವಜನರ ಹಾರಾಟ ಇಲ್ಲದೆ ತಣ್ಣಗಿನ ರೂಪದಲ್ಲಿ ಕೇಳುಗರಲ್ಲಿ ಹಿಂದುತ್ವದ ಪರ ಅಲೆ ಎಬ್ಬಿಸುವ ಸಮಾವೇಶ ನಡೆಯುತ್ತಿರೋದು ಇದೇ ಮೊದಲು.
Mangalore Hindu Samavesha to be organised in Club house app for the first time where members around the world will be able to watch live.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm