ಬ್ರೇಕಿಂಗ್ ನ್ಯೂಸ್
30-08-21 05:43 pm Mangaluru Correspondent ಕರಾವಳಿ
ಉಳ್ಳಾಲ, ಆ.30: ಎರಡು ದಿನಗಳ ಹಿಂದೆ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದಾಗ ಸಮುದ್ರಕ್ಕೆ ಬಿದ್ದು ಸಾವಿನ ದವಡೆಗೆ ಸಿಲುಕಿದ್ದ ನವಾಝ್ ಬೆಂಗ್ರೆಯನ್ನ ರಕ್ಷಿಸಿದ್ದ ಉಳ್ಳಾಲ ಹೊಯ್ಗೆಯ ಮೀನುಗಾರರ ತಂಡವನ್ನ ಯುನಿವರ್ಸಲ್ ಮೆಲೋಡಿಸ್ ಮತ್ತು ಲೋಬೋ ಸೌಂಡ್ಸ್ ಪೆರ್ಮನ್ನೂರು ಸಂಸ್ಥೆಯು ಗೌರವಿಸಿ ಸನ್ಮಾನಿಸಿದೆ.
ನಿನ್ನೆ ನಡೆದ ಫೇಸ್ ಬುಕ್ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಉಳ್ಳಾಲ ಹೊಯ್ಗೆಯ ಐವರು ಜೀವ ರಕ್ಷಕ ಮೀನುಗಾರರನ್ನ ಸನ್ಮಾನಿಸಲಾಯಿತು.
ಉಳ್ಳಾಲದ ಅಳಿವೆ ಬಾಗಿಲಿನ ಸಮುದ್ರದಲ್ಲಿ ನಾಡದೋಣಿಯಲ್ಲಿ ಮೀನುಗಾರಿಕೆ ಮಾಡಿ ಹಿಂತಿರುಗುವಾಗ ಅಲೆಗಳ ಆರ್ಭಟಕ್ಕೆ ಸಮುದ್ರಕ್ಕೆಸೆಯಲ್ಪಟ್ಟ ನವಾಝ್ ಬೆಂಗ್ರೆಯನ್ನು ಸಾವಿನ ದವಡೆಯಿಂದ ರಕ್ಷಿಸಿದ ಉಳ್ಳಾಲ ಹೊಯ್ಗೆಯ ಮೀನುಗಾರರಾದ ಪ್ರೇಮ್ ಪ್ರಕಾಶ್ ಡಿಸೋಜ, ಅನಿಲ್ ಮೊಂತೇರೊ, ಸೂರ್ಯ ಪ್ರಕಾಶ್, ರಿತೇಶ್ ಡಿಸೋಜ ಮತ್ತು ಅಜಿತ್ ಕರ್ಕೇರ ಬೆಂಗ್ರೆ ಅವರನ್ನು ಯುನಿವರ್ಸಲ್ ಮೆಲೋಡಿಸ್ ಮತ್ತು ಲೋಬೋ ಸೌಂಡ್ಸ್ ಪೆರ್ಮನ್ನೂರು ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಮ್ಯೂಸಿಕಲ್ ಧಮಾಕ- ಸೀಸನ್ 15 ಫೇಸ್ ಬುಕ್ ನೇರ ಪ್ರಸಾರದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಮುಖ್ಯಸ್ಥ ಲಿಯೋ ಡಿಸೋಜ ರಾಣಿಪುರ, ಲೋಬೋ ಸೌಂಡ್ಸ್ ಪೆರ್ಮನ್ನೂರಿನ ಮಾಲೀಕ ಜೈಸನ್ ಲೋಬೊ ಹಾಗೂ ಸಂಗೀತ ಕಾರ್ಯಕ್ರಮದ ಸದಸ್ಯರಾದ ರವಿರಾಜ್ ಡಿಸೋಜ, ರೋಲ್ಟನ್ ಪಿಂಟೋ, ಮೆಲ್ವಿಟಾ ಡಿಸೋಜ, ಕ್ಲಿಯೋನ್ ಡಿಸೋಜ, ಪ್ರೀತಮ್ ನೊರೊನ್ಹ ಪಜೀರು, ಕಾರ್ಯಕ್ರಮದ ಪ್ರಾಯೋಜಕ ಮ್ಯಾಕ್ಸಿಮ್ ಡಿಸೋಜ ರಾಣಿಪುರ, ಡೋಲ್ಫಿ ಡಿಸೋಜ ರಾಣಿಪುರ, ರೋನಿ ಡಿಸೋಜ ಪೆರ್ಮನ್ನೂರು, ರೇಡಿಯೋ ಸಾರಂಗ್ ಕಾರ್ಯಕ್ರಮ ನಿರೂಪಕ
ರೋಷನ್ ಕ್ರಾಸ್ತಾ ಪಾಲ್ದನೆ ಮೊದಲಾದವರು ಉಪಸ್ಥಿತರಿದ್ದರು.
ಫೇಸ್ ಬುಕ್ ನೇರಪ್ರಸಾರ ವೀಕ್ಷಿಸಿದ ಸಾವಿರಾರು ಮಂದಿ ಜೀವ ಪಣಕ್ಕಿಟ್ಟು ಸಮುದ್ರಪಾಲಾಗುತ್ತಿದ್ದ ಪ್ರಾಣ ಉಳಿಸಿದ ಉಳ್ಳಾಲ ಹೊಯ್ಗೆಯ ಐವರು ಯುವಕರ ಸಾಧನೆಯನ್ನು ಪ್ರಶಂಸಿದ್ದಾರೆ.
Ullal Fishermen rescued from drowning team felicitated for saving life
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
03-10-25 09:09 pm
HK News Desk
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
ಮುಂದಿನ ವಾರ ಅಫ್ಘಾನಿಸ್ತಾನದ ತಾಲಿಬಾನ್ ಸಚಿವ ಭಾರತಕ್...
03-10-25 04:48 pm
India-Russia Summit, Vladimir Putin: ಡಿಸೆಂಬರ್...
02-10-25 03:45 pm
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
03-10-25 11:28 pm
HK News Desk
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm