ಬ್ರೇಕಿಂಗ್ ನ್ಯೂಸ್
30-08-21 06:21 pm Mangaluru correspondent ಕರಾವಳಿ
ಉಳ್ಳಾಲ, ಆ.30: ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ಆಗಬೇಕಾದ ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರೂಪಿಸಲಾದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ 10 ವರ್ಷದೊಳಗೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎನ್. ಹೇಳಿದರು.
ಮಂಗಳೂರು ವಿವಿ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ವತಿಯಿಂದ ಕೊಣಾಜೆಯ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣದ ಕಲಿಕಾ ನೀತಿ, ಮೌಲ್ಯಮಾಪನ, ಪಠ್ಯಕ್ರಮದಲ್ಲಿ ಸುಧಾರಣೆ ಆಗಬೇಕಿದೆ. ಆದರೆ ಈ ನಿಟ್ಟಿನಲ್ಲಿ ನಾವು ಹೆಚ್ಚಿನ ಆದ್ಯತೆ ನೀಡಿಲ್ಲ. ಕಲಿಕೆಯ ಆವಿಷ್ಕಾರಕ್ಕೆ ಆದ್ಯತೆ ನೀಡಿದರೆ ಸಾಲದು. ಹೊಸ ಶಿಕ್ಷಣ ನೀತಿ ರೂಪಿಸಲು 5 ವರ್ಷ ತೆಗೆದುಕೊಳ್ಳಲಾಗಿದೆ. 15 ವರ್ಷದೊಳಗೆ ಈ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಆದರೆ ರಾಜ್ಯವು 10 ವರ್ಷದೊಳಗೆ ಅನುಷ್ಠಾನಗೊಳಿಸುವ ಗುರಿ ಹೊಂದಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಆತುರದಲ್ಲಿ ಮಾಡಲು ಹೊರಟಿದ್ದಾರೆ ಅಂತ ಕೆಲವರು ಹೇಳ್ತಿದಾರೆ. ಆದರೆ ಈ ಮಾತು ಸರಿಯಲ್ಲ, ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿದೆ. ಈ ನೀತಿ ಕೇಸರೀಕರಣ ಅನ್ನೋದು ಸುಮ್ಮನೆ, ಈ ವಾದದಲ್ಲಿಯೂ ಹುರುಳಿಲ್ಲ. ಇದರಲ್ಲಿ ವಿದ್ಯಾರ್ಥಿಗಳಿಗೆ ವಿರುದ್ಧವಾದ ಅಂಶಗಳಿದ್ದರೆ ತೋರಿಸಿ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಈಗಿನ ವಿಷಯಗಳನ್ನೇ ಬಳಸುತ್ತೇವೆ. ಆದ್ರೆ ವಿದ್ಯಾರ್ಥಿಗಳ ಆಯ್ಕೆಗೆ ಪ್ರತ್ಯೇಕವಾದ ಅವಕಾಶವಿದೆ ಎಂದು ಹೇಳಿದರು.
ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಸಕರಾದ ಉಮನಾಥ ಕೋಟ್ಯಾನ್, ಲಾಲಾಜಿ ಮೆಂಡನ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ ಮತ್ತಿತರರು ಉಪಸ್ಥಿತರಿದ್ದರು.
“Some people are saying that the government is trying to implement the National Education Policy (NEP) in haste. This is not correct. Lots of discussions have taken place in this regard. It is a myth that this policy is ‘saffronisation’ of the country. Let anyone show the points that are against the students in this policy. We will use the present subjects itself during the implementation of NEP. But the students have separate opportunity to choose the subjects,” said higher education minister Dr Ashwath Narayan.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm