ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಲಾರಿ ; ರಿಪೇರಿ ಮಾಡುತ್ತಿದ್ದ ಮೆಕ್ಯಾನಿಕ್ ಮೇಲೆರಗಿದ ಪಿಕಪ್ ! ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವು ! 

30-08-21 07:42 pm       Mangaluru correspondent   ಕರಾವಳಿ

ಲಾರಿಯನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿಯಾಗಿ ಇಬ್ಬರು ಮೆಕ್ಯಾನಿಕ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸಂಭವಿಸಿದೆ.

ಉಪ್ಪಿನಂಗಡಿ, ಆಗಸ್ಟ್ 30: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿಯಾಗಿ ಇಬ್ಬರು ಮೆಕ್ಯಾನಿಕ್ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ ಸಂಭವಿಸಿದೆ.

ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಹಮ್ಮದ್ ಫೈಸಲ್ (40) ಗಂಭೀರ ಸ್ಥಿತಿಯಲ್ಲಿದ್ದು ಮಧು (35) ಮತ್ತು ಇನ್ನೊಬ್ಬ ವ್ಯಕ್ತಿ ಸ್ಥಳದಲ್ಲೇ ಸಾವು ಕಂಡಿದ್ದಾರೆ. 

ಮಳೆಯ ನಡುವೆ ಮೂವರು ಮೆಕ್ಯಾನಿಕ್ ಗಳು ಸೇರಿಕೊಂಡು ರಸ್ತೆಯ ಮಧ್ಯದಲ್ಲೇ ಲಾರಿ ರಿಪೇರಿ ಕೆಲಸ ನಡೆಸುತ್ತಿದ್ದರು. ಈ ವೇಳೆ, ಹಿಂಬದಿಯಿಂದ ಯಮದೂತನಂತೆ ಧಾವಿಸಿದ ಪಿಕಪ್ ಮೂವರ ಮೇಲಿಂದಲೇ ಹರಿದು ಹೋಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Uppinangady accident Two mechanic die on spot after pickup rams on them. The said two were repairing a truck that was stuck on the road side during which a pick up van lost control ane rammed on them.