ಬ್ರೇಕಿಂಗ್ ನ್ಯೂಸ್
30-08-21 10:13 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೇರಳಕ್ಕೆ ಹೊಂದಿಕೊಂಡಿದ್ದಲ್ಲದೆ, ಕೋವಿಡ್ ಪ್ರಕರಣ ಕಡಿಮೆಯಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಲಾಕ್ಡೌನ್ ಮುಂದುವರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದೇ ವೇಳೆ, ಮಹಾರಾಷ್ಟ್ರ ಹೊಂದಿಕೊಂಡಿರುವ ಬೆಳಗಾವಿ, ವಿಜಯಪುರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಹಿಂದಕ್ಕೆ ಪಡೆಯಲಾಗಿದೆ.
ಸೆ.13ರ ವರೆಗೆ ಹೊಸ ಆದೇಶ ಜಾರಿಯಲ್ಲಿ ಇರಲಿದ್ದು ಅಲ್ಲೀ ವರೆಗೂ ನೈಟ್ ಕರ್ಫ್ಯೂ ಮತ್ತು ಇತರೇ ಕೋವಿಡ್ ನಿಯಮಗಳು ಅನ್ವಯವಾಗಲಿದೆ. ಇದೇ ವೇಳೆ, ದಕ್ಷಿಣ ಕನ್ನಡ ಸೇರಿ ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಮದುವೆ ಇನ್ನಿತರ ಕೌಟುಂಬಿಕ ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ.
ಆದರೆ, ಮದುವೆ ಸಮಾರಂಭಗಳು ಸಣ್ಣ ಹಾಲ್ ಗಳಲ್ಲಿ ಅದರ ಸಾಮರ್ಥ್ಯದ ಅರ್ಧದಷ್ಟು ಮತ್ತು ದೊಡ್ಡ ಹಾಲ್ ಗಳಲ್ಲಿ 400ಕ್ಕೆ ಮೀರದಂತೆ ಜನರು ಸೇರಲು ಅವಕಾಶ ನೀಡಲಾಗಿದೆ. ವೀಕೆಂಡ್ ಲಾಕ್ಡೌನ್ ಇದ್ದರೂ ಈ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಅವಕಾಶ ಇರುತ್ತದೆ. ಪರೀಕ್ಷೆಗೆ ಬರುವವರು ಹಾಲ್ ಟಿಕೆಟ್ ತೋರಿಸಿ ಸಂಚರಿಸಬಹುದು.
ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಜೊತೆಗೆ, ಮೆಡಿಕಲ್, ಇಂಜಿನಿಯರಿಂಗ್ ಇನ್ನಿತರ ಉನ್ನತ ಶಿಕ್ಷಣಕ್ಕೆ ಬರುವ ವಿದ್ಯಾರ್ಥಿಗಳು ಏಳು ದಿನಗಳ ಕಾಲ ಕ್ವಾರಂಟೈನ್ ಇರಬೇಕು. ಆನಂತರ ಮತ್ತೊಮ್ಮೆ ಟೆಸ್ಟ್ ಮಾಡಿಸಿ, ನೆಗೆಟಿವ್ ಆದಲ್ಲಿ ಮಾತ್ರ ಕಾಲೇಜು ತರಗತಿ ತೆರಳಬಹುದು. ಕೇರಳ, ಮಹಾರಾಷ್ಟ್ರ ಗಡಿಭಾಗದಲ್ಲಿ ಪೊಲೀಸರ ಚೆಕ್ ಪೋಸ್ಟ್ ತಪಾಸಣೆ ಈಗಿನಂತೆಯೇ ಪರಿಶೀಲನೆ ಯಥಾಸ್ಥಿತಿ ಇರಲಿದೆ.
Night curfew would be relaxed in all areas except Kodagu, Hassan, Dakshina Kannada and Udupi districts, which share borders with Kerala. Karnataka government on Monday decided to ease night curfew regulations imposed in the state due to Covid-19 in most areas except four districts, which are sharing its borders with Kerala.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm