ಬ್ರೇಕಿಂಗ್ ನ್ಯೂಸ್
01-09-21 01:29 pm Mangaluru Correspondent ಕರಾವಳಿ
ಮಂಗಳೂರು, ಸೆ.1: ಫಲ್ಗುಣಿ ನದಿಯಿಂದ ವಿಷಯುಕ್ತ ನೀರನ್ನು ಜನರಿಗೆ ಕುಡಿಯಲು ಕೊಡುತ್ತಿರುವ ವಿಚಾರದ ಬಗ್ಗೆ ಹೈಕೋರ್ಟಿಗೆ ವರದಿ ಸಲ್ಲಿಕೆಯಾಗಿದ್ದು, ನ್ಯಾಯಾಧೀಶರು ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಶೈಲಿ ಬಗ್ಗೆ ಮತ್ತೆ ಗರಂ ಆಗಿದ್ದಾರೆ. ನೀವು ನೀರಿನೊಂದಿಗೆ ವಿಷವನ್ನು ಬೆರಸಿ ಜನರಿಗೆ ಕುಡಿಯಲು ಕೊಡುತ್ತಿದ್ದೀರಾ ಎಂದು ಮಹಾನಗರ ಪಾಲಿಕೆಯನ್ನು ತೀವ್ರವಾಗಿ ತರಾಟೆಗೆ ಎತ್ತಿಕೊಂಡಿದೆ.

ಮಂಗಳೂರು ತಾಲೂಕಿನ 12 ಗ್ರಾಮಗಳ ವ್ಯಾಪ್ತಿಗೆ ಮರವೂರು ಡ್ಯಾಮಿನಿಂದ ಕುಡಿಯುವ ನೀರನ್ನು ಕೊಡಲಾಗುತ್ತಿದೆ. ಇದರ ಬಗ್ಗೆ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಲಿನ ನೀರನ್ನು ಕುಡಿಯಲು ಕೊಡುತ್ತಿರುವುದಾಗಿ ಆಕ್ಷೇಪಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿತ್ತು. ಆನಂತರ ಹೈಕೋರ್ಟ್, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಧಿಕಾರಕ್ಕೆ ನೀರಿನ ತಪಾಸಣೆಗೆ ಸೂಚನೆ ನೀಡಿತ್ತು. ತಿಂಗಳ ಹಿಂದೆ ಮಾಲಿನ್ಯ ನಿಯಂತ್ರಣ ಮಂಡಳಿಯವರು ನೀರಿನಲ್ಲಿ ವಿಷಕಾರಿ ವಸ್ತು ಇರುವ ಬಗ್ಗೆ ಹೈಕೋರ್ಟಿಗೆ ವರದಿಯನ್ನೂ ನೀಡಿದ್ದರು.



ಇದೀಗ ಮಾಲಿನ್ಯ ನಿಯಂತ್ರಣ ಮಂಡಳಿಯ ಪರ ವಕೀಲರು ಪ್ರಯೋಗಾಲಯ ವರದಿಯನ್ನು ನ್ಯಾಯಾಧೀಶರ ಮುಂದೆ ಸಲ್ಲಿಸಿದ್ದಾರೆ. ಜಲಾಶಯ ಸೇರುವ ನೀರಿನಲ್ಲಿ ಅಮೋನಿಯಂ ನೈಟ್ರೇಟ್ ಮತ್ತು ಕಬ್ಬಿಣ, ಗಂಧಕ ರೀತಿಯ ವಿಷಕಾರಿ ಅಂಶಗಳು ಇರುವ ಬಗ್ಗೆ ವರದಿ ನೀಡಿದ್ದರು. ಅಲ್ಲದೆ, ಈ ನೀರನ್ನು ಕುಡಿಯಲು ಬಳಸುವುದು ಸೂಕ್ತವಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. ಅಲ್ಲದೆ, ಪಚ್ಚನಾಡಿ ತ್ಯಾಜ್ಯ ಶುದ್ಧೀಕರಣ ಘಟಕದಿಂದ ಯಾವುದೇ ರೀತಿಯಲ್ಲಿ ಕಲುಷಿತ ನೀರನ್ನು ಬಿಡಬಾರದು ಎಂದು ಮಂಗಳೂರಿನ ಪರಿಸರ ಅಧಿಕಾರಿಗಳು ವರದಿಯಲ್ಲಿ ಹೇಳಿದ್ದರು.
ವರದಿಯ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಕುಡಿಯುವ ನೀರು ಮಲಿನವಾಗಿರುವುದು ಗಂಭೀರ ವಿಚಾರ. ನೀವು ಜನರಿಗೆ ನೀರಿನೊಂದಿಗೆ ವಿಷ ಬೆರಸಿ ಕೊಡುತ್ತಿದ್ದೀರಾ ? ನದಿಯಲ್ಲಿ ವಿಷಕಾರಿ ಅಂಶಗಳಿವೆ ಅಂದರೆ, ಅದನ್ನೇ ಕುಡಿಯಲು ಕೊಡುತ್ತಿರೋದಾ.. ಶುದ್ಧ ಕುಡಿಯುವ ನೀರಿಗೆ ಏನು ಪರ್ಯಾಯ ವ್ಯವಸ್ಥೆ ಮಾಡಿದ್ದೀರಿ ಎಂದು ರಾಜ್ಯ ಸರಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಯನ್ನು ತೀವ್ರವಾಗಿ ಪ್ರಶ್ನೆ ಮಾಡಿದ್ದು, ಮುಂದಿನ ವಿಚಾರಣೆ ದಿನಾಂಕದ ಒಳಗೆ ಪರ್ಯಾಯ ವ್ಯವಸ್ಥೆ ಬಗ್ಗೆ ವರದಿ ನೀಡುವಂತೆ ನಿರ್ದೇಶನ ನೀಡಿದೆ.
Karnataka high court slams MCC over Maravoor dam issue questions if you have drunk poisoned water. The marvoor dam has been polluted by dirty seepage water and has been getting circulated to 12 villages of Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm