ಬ್ರೇಕಿಂಗ್ ನ್ಯೂಸ್
01-09-21 03:57 pm Udupi Correspondent ಕರಾವಳಿ
ಉಡುಪಿ, ಸೆ.1: ಯಾವುದೇ ರಾಜ್ಯದ ಗಡಿಯನ್ನು ಹೊಂದಿರದ ಉಡುಪಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಿರುವ ವಿಚಾರದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉಡುಪಿ ಯಾವುದೇ ಗಡಿ ಜಿಲ್ಲೆಗಳ ಸಾಲಿಗೆ ಸೇರುವುದಿಲ್ಲ. ಯಾವುದೇ ಇತರೇ ರಾಜ್ಯದ ಗಡಿಯನ್ನೂ ಹೊಂದಿಕೊಂಡಿಲ್ಲ. ಉಡುಪಿ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕೂಡ ಕಡಿಮೆಯಿದೆ. ಪಾಸಿಟಿವ್ ರೇಟ್ ಶೇ. 1.5 ಕ್ಕೆ ಇಳಿಕೆಯಾಗಿದೆ. ಹೀಗಿದ್ದರೂ ಈ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಿದ್ದು ಯಾಕೆಂದು ಗೊತ್ತಾಗಲ್ಲ. ಹೀಗಾಗಿ ಉಡುಪಿ ಜಿಲ್ಲೆಯನ್ನು ವೀಕೆಂಡ್ ಕರ್ಫ್ಯೂ ನಿಂದ ಹೊರಗಿಡಬೇಕು ಎಂದು ಒತ್ತಾಯಿಸಿದರು.
ಉಡುಪಿ ಜಿಲ್ಲೆಯ ಜನರು ಕಟ್ಟುನಿಟ್ಟಾಗಿ ಕೋವಿಡ್ ನಿಯಮ ಪಾಲಿಸುತ್ತಿದ್ದಾರೆ. ದಿನಕ್ಕೆ ಹತ್ತು ಸಾವಿರದಷ್ಟು ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಕರ್ಫ್ಯೂ ವಿಧಿಸಿದರೆ ವ್ಯಾಪಾರಸ್ಥರಿಗೆ ಮತ್ತೊಮ್ಮೆ ಸಮಸ್ಯೆಯಾಗುತ್ತೆ. ಈ ಬಗ್ಗೆ ನಾನು ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ. ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರ ಜೊತೆಯೂ ಚರ್ಚಿಸಿದ್ದೇನೆ. ಸಚಿವ ಸುನಿಲ್ ಕೂಡ ನನ್ನ ನಿಲುವು ಒಪ್ಪಿದ್ದಾರೆ. ಆರೋಗ್ಯ ಸಚಿವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ ಎಂದು ರಘುಪತಿ ಭಟ್ ತಿಳಿಸಿದ್ದಾರೆ.




ಜಿಲ್ಲೆಯಲ್ಲಿ ಶಾಲೆಗಳು ಕೂಡ ಆರಂಭಗೊಂಡಿದ್ದು, ಈ ನಡುವೆ ಕರ್ಪ್ಯೂ ಹೇರುವುದು ಸರಿಯಲ್ಲ. ನಮ್ಮಲ್ಲಿ ಶೇ. 70 ಮೊದಲ ಡೋಸ್ ಹಾಗೂ ಶೇ. 30 ರಷ್ಟು ಎರಡನೇ ಡೋಸ್ ಲಸಿಕೆ ನೀಡಿಯಾಗಿದೆ. ವ್ಯಾಕ್ಸಿನೇಶನ್ ಆದ ಮೇಲೂ ಕರ್ಪ್ಯೂ ಜಾರಿಯಾದರೆ ಜನರು ವಿಶ್ವಾಸ ಕಳೆದುಕೊಳ್ಳುತ್ತಾರೆ. ಗಡಿ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಸರಿಯಾದ ನಿರ್ಧಾರ. ಆದರೆ ಉಡುಪಿ ಜಿಲ್ಲೆಗೆ ಸರಿಯಲ್ಲ ಎಂದು ಹೇಳಿದರು.
ಸಾರ್ವಜನಿಕ ಗಣೇಶೋತ್ಸವ ವಿಚಾರದಲ್ಲಿ ಪ್ರತಿಕ್ರಿಯಿಸಿದ ಶಾಸಕ ರಘುಪತಿ ಭಟ್, ಗಣೇಶೋತ್ಸವವನ್ನು ಕಳೆದ ವರ್ಷವೂ ವಿಜೃಂಭಣೆಯಿಲ್ಲದೆ ಆಚರಣೆ ಮಾಡಿದ್ದೇವೆ. ಹಾಗೆಂದು ಕೋವಿಡ್ ಸಮಯದಲ್ಲಿ ಮೆರವಣಿಗೆ ಮಾಡಬೇಕೆಂಬ ಅಪೇಕ್ಷೆ ಸರಿಯಲ್ಲ. ಶಾಸ್ತ್ರೋಕ್ತವಾಗಿ ಗಣೇಶನ ಮೂರ್ತಿ ಇಟ್ಟು ಪೂಜಿಸಲು ಅನುಮತಿ ಸಿಗಲಿದೆ. ಸರ್ಕಾರ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶ ನೀಡಲಿದೆ ಎಂದು ಹೇಳಿದರು.
Udupi MLA Raghupathi bhat slams govt over weekend curfew in Udupi
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm