ಬ್ರೇಕಿಂಗ್ ನ್ಯೂಸ್
01-09-21 10:42 pm Mangaluru correspondent ಕರಾವಳಿ
ಬಂಟ್ವಾಳ, ಸೆ.1: ಬಂಟ್ವಾಳ ತಾಲೂಕಿನ ಮೇಗಿನ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ- ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗಸಂಸ್ಥೆ) ಇದರ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ.
ಗ್ರಾನೈಟ್ (ಕಣ)ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದು 25 ಸಾಲುಗಳನ್ನು ಹೊಂದಿದೆ. ಶಾಸನವು 178 ಸೆಂ.ಮೀ ಎತ್ತರ ಮತ್ತು 78 ಸೆಂ.ಮೀ ಅಳತೆಯನ್ನು ಹೊಂದಿರುತ್ತದೆ. ಶಕವರುಷ 1286 ನೇ ಕ್ರೋಧಿ ಸಂವತ್ಸರದ ಮೇಷ ಮಾಸ 13 (ಕ್ರಿ.ಶ 1364 ಎಪ್ರಿಲ್ 27 - ಶುಕ್ರವಾರ) ಲು ಪಾಂಡೇಶ್ವರ ದೇವರು ಹಾಗೂ ದೇವರಾಜಮ(ಯ)ತಿ ಶ್ರೀಪಾದಂಗಳ ಸಮ್ಮುಖದಲ್ಲಿ ಮಿತ್ತ ಕೂರ್ಯ್ಯಳ ಮತ್ತು ಚಿಳ್ತ ಕೂರ್ಯ್ಯಳ (ಪ್ರಸ್ತುತ ಮೇಗಿನ ಕುರಿಯಾಳ ಮತ್ತು ತಿರ್ತ ಕುರಿಯಾಳ) ವಾಸಿಗಳು ಅಕ್ಕಿ ಮುಡಿ ಮತ್ತು ಗದ್ಯಾಣಗಳನ್ನು ಪಾಂಡೇಶ್ವರ ದೇವರಿಗೆ ಮಂಗಳೂರು ರಾಜ್ಯಪಾಲ ಮಾದರಸ ಒಡೆಯನ (ಕ್ರಿ.ಶ. 1364) ಮೂಲಕ ದಾನ ಮಾಡಿದ ಉಲ್ಲೇಖ ಈ ಶಾಸನದಲ್ಲಿದೆ.
ಮಿತ್ತ ಕೂರ್ಯ್ಯಲದ ರಾಜು ಎಂಬಳಿಯ ವಂಜುಕಡಿತಲೆಯನ ತಮ್ಮ ಹಲಯಬರ, ಆರ್ಯ ಬಳಿಯ ಕೊರತಿ ಸೆಟ್ಟಿತಿಯ ತಮ್ಮ ಬಂಕಿಯಣ, ಬಡಲೆ ಮಾಳಗೌಡರ ಭೂಮಿಯಿಂದ ಹಾಗೂ ಚಿಳ್ತ ಕೂರ್ಯ್ಯಲದ ಪುಂಣ್ಯಂ ಕುಂದಯ ಸಂಬು ಮತ್ತನವರ ಭೂಮಿಯಿಂದ ಅರಸನಿಗೆ ಪ್ರತಿ ವರ್ಷ 34 ಗದ್ಯಾಣಗಳು ಮತ್ತು 30 ಮುಡಿ ಭತ್ತವನ್ನು ಪಾಂಡೇಶ್ವರ ದೇವರ ರಕ್ಷೋಭೋಗವಾಗಿ ಮಾದರಸ ಒಡೆಯರ ಮೂಲಕವಾಗಿ ನೀಡಿದ ಉಲ್ಲೇಖವಿದೆ. ಈ ಧರ್ಮಕ್ಕೆ ಯಾರೊಬ್ಬರು ತಪ್ಪಿದರೆ ಅರಸನಿಗೆ 1000 ಗದ್ಯಾಣವನ್ನು ತೆರಬೇಕೆಂದು ತಿಳಿಸಲಾಗಿದೆ.
ಶಾಸನದ ಕೊನೆಯಲ್ಲಿ ಶಾಪಾಶಯ ವಾಕ್ಯವಿದ್ದು, ಕೊನೆಯಲ್ಲಿ ಈ ಶಾಸನವನ್ನು ಬರೆದವ ಅಲುಪಭೋವ (?) ಎಂಬ ಉಲ್ಲೇಖವಿದೆ.
ಕ್ಷೇತ್ರಕಾರ್ಯ ಶೋಧನೆಯ ಸಂದರ್ಭದಲ್ಲಿ ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲಸಾರ್, ಗಣೇಶ್ ಆಚಾರ್ಯ, ಸದಾಶಿವ ಆಚಾರ್ಯ, ಗುರುವಪ್ಪ ಪೂಜಾರಿ, ಕಿಶನ್ ಕುಮಾರ್ ಮೂಡುಬೆಳ್ಳೆ ಅವರು ಸಹಕಾರ ನೀಡಿರುತ್ತಾರೆ.
13th century Monument of Pandeshwara has been found in kuriyala bantwal.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm