ಬ್ರೇಕಿಂಗ್ ನ್ಯೂಸ್
03-09-21 05:59 pm Mangaluru Correspondent ಕರಾವಳಿ
ಉಳ್ಳಾಲ, ಸೆ.3: ಉಳ್ಳಾಲ ಸಯ್ಯದ್ ಮದನಿ ದರ್ಗಾ ಸಮಿತಿ ಮತ್ತು ಉಳ್ಳಾಲ ಜುಮಾ ಮಸೀದಿ ಆಶ್ರಯದಲ್ಲಿ ಕುದ್ರೋಳಿ ಕ್ಷೇತ್ರದ ಗುರುಬೆಳದಿಂಗಳು ಸೇವಾ ಸಂಸ್ಥೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ ಅಂಗವಾಗಿ ಉಳ್ಳಾಲ ದರ್ಗಾ ವಠಾರದಲ್ಲಿ ಔಷಧೀಯ ಸಸಿಗಳನ್ನು ನೆಡಲಾಯಿತು.
ಗುರುಬೆಳದಿಂಗಳು ಸೇವಾ ಸಂಸ್ಥೆ ಅಧ್ಯಕ್ಷರು ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಚಿ ಆರ್.ಪದ್ಮರಾಜ್ ಮಾತನಾಡಿ ನಾರಾಯಣ ಗುರುಗುಳ ತತ್ವ , ಆದರ್ಶಗಳನ್ನು ಸಮಾಜಕ್ಕೆ ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಹೇಳಿದರು. ನಮ್ಮ ದೇಶವು ವಿವಿಧತೆಯಲ್ಲಿ ಏಕತೆ ಹೊಂದಿದೆ. ನಾವೆಲ್ಲರು ಜಾತಿ, ಧರ್ಮ ಮರೆತು ಜೊತೆಯಾಗಿ ನಡೆಯಬೇಕು. ಈ ಅರ್ಥಪೂರ್ಣ ಕಾರ್ಯದ ಸಂದೇಶವು ನಮ್ಮ ಜಿಲ್ಲೆಯಿಂದ ದೇಶಕ್ಕೆ ರವಾನಿಸುವಂತಾಗಬೇಕು ಎಂದರು.
ಶಾಸಕ ಯು.ಟಿ ಖಾದರ್ ಮಾತನಾಡಿ ಇಂದು ಸಮಾಜಕ್ಕೆ ಸೌಹಾರ್ದ, ಸಹೋದರತ್ವದ ಅಗತ್ಯ ಕಾಣುತ್ತಿದೆ. ನಮ್ಮ ಮುಂದಿನ ಪೀಳಿಗೆ ಸೌಹಾರ್ದದ ಸಮಾಜ ನಿರ್ಮಾಣ ಮಾಡಬೇಕಾದರೆ ಮೊದಲು ನಾವು ಸೌಹಾರ್ದದ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಜಾತಿ, ಧರ್ಮ ಆಧಾರದಲ್ಲಿ ನಮ್ಮನ್ನು ವಿಭಾಗಿಸುವವರನ್ನ ಎಲ್ಲರೂ ಜೊತೆಯಾಗಿ ಹಿಮ್ಮೆಟ್ಟಿಸಬೇಕು ಎಂದರು.




ರಾಜ್ಯಸಭಾ ಪ್ರತಿಪಕ್ಷದ ಮುಖ್ಯ ಸಚೇತಕ ಡಾ.ಸಯ್ಯದ್ ನಾಸಿರ್ ಹುಸೇನ್, ಉಳ್ಳಾಲ ದರ್ಗಾ ಅಧ್ಯಕ್ಷರಾದ ರಶೀದ್ ಹಾಜಿ , ಉಪಾಧ್ಯಕ್ಷರಾದ ಯು.ಕೆ.ಮೋನು ಇಸ್ಮಾಯಿಲ್, ಬಾವ ಮೊಹಮ್ಮದ್, ಪ್ರದಾನ ಕಾರ್ಯದರ್ಶಿ ಮೊಹಮ್ಮದ್ ತ್ವಾಹ, ಜತೆ ಕಾರ್ಯದರ್ಶಿಗಳಾದ ನೌಷಾದ್ ಅಲಿ, ಕೋಶಾಧಿಕಾರಿ ಯು.ಕೆ.ಇಲ್ಯಾಸ್, ನಗರಸಭಾ ಅಧ್ಯಕ್ಷೆ ಚಿತ್ರಕಲಾ , ಉಪಾಧ್ಯಕ್ಷರಾದ ಆಯೂಬ್ ಮಂಚಿಲ ಮೊದಲಾದವರು ಉಪಸ್ಥಿತರಿದ್ದರು.
ಕುದ್ರೋಳಿಯ ಗುರುಬೆಳದಿಂಗಳು ಸೇವಾ ಸಂಸ್ಥೆಯ ವತಿಯಿಂದ ಚರ್ಚ್, ದರ್ಗಾ, ಬಸದಿ, ದೈವಸ್ಥಾನ, ದೇವಸ್ಥಾನ, ಗುರುದ್ವಾರ, ಗರೋಡಿಗಳಲ್ಲಿ ಅಳಿವಿನಂಚಿನಲ್ಲಿರುವ ಔಷಧೀಯ ಸಸ್ಯಗಳನ್ನು ನೆಡುವ ಯೋಜನೆಗೆ ಇಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ, ಗುರುಪೂಜೆ ನೇರವೇರಿಸಿ, ಶ್ರೀ ಗೆಜ್ಜೆಗಿರಿ ನಂದನಬಿತ್ತ್ಲ್ ಕ್ಷೇತ್ರದಲ್ಲಿ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಲಾಯಿತು.
Ullal sayed mdani darga places Narayana Guru statue In memory
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm