ಬ್ರೇಕಿಂಗ್ ನ್ಯೂಸ್
07-09-20 06:26 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 7: ಅಂಗಡಿ ಮಾಲಕ ತಾನು ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ತಾನೇ ಬೆಂಕಿ ಹಚ್ಚಿ ಭಸ್ಮ ಮಾಡಿದ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರು ಸಮೀಪ ನಡೆದಿದೆ. ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದ್ದು ಈ ಘಟನೆ ಸ್ಥಳೀಯರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಅಂಗಡಿ ಮಾಲಿಕ ತನ್ನ ಅಂಗಡಿಗೆ ತಾನೇ ಬೆಂಕಿ ಇಟ್ಟಿದೇಕೆ ಎಂಬುದು ಮಾತ್ರ ನಿಗೂಢವಾಗಿದೆ.
ಮಾವಿನಕಟ್ಟೆ ನಿವಾಸಿ ಮಹಮ್ಮದ್ ಎಂಬವರು ಕಳೆದ 4 ವರ್ಷಗಳಿಂದ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಲಾಕ್ಡೌನ್ ಬಳಿಕ ಕಳೆದ ಎರಡು ತಿಂಗಳಿನಿಂದ ಅಂಗಡಿಯಲ್ಲಿ ವ್ಯಾಪಾರ ಆರಂಭಿಸಿದ್ದರು. ಅಂಗಡಿಯಲ್ಲಿ ಸ್ಟೇಶನರಿ ಸಾಮಾಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಕೂಡಾ ಅದರೊಳಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್ರವರು ಅಂಗಡಿ ಬಾಗಿಲು ತೆರೆದಿದ್ದರು. ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಂಗಡಿಯೊಳಗೆ ಬೆಂಕಿ ಹಾಕುತ್ತಿರುವ ದೃಶ್ಯವನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದು ಆ ವೇಳೆ ಬೆಂಕಿ ನಂದಿಸದಂತೆ ಮಾಲಕ ಮಹಮ್ಮದ್ ತಡೆದಿದ್ದಾರೆ ಎಂದು ಹೇಳಲಾಗಿದೆ.
ತನ್ನ ಅಂಗಡಿಗೆ ಬೆಂಕಿ ಇಟ್ಟ ಮಹಮ್ಮದ್ ನಂತರ ತನ್ನ ಮನೆಯತ್ತ ತೆರಳಿದ್ದಾರೆ. ಆದರೆ ಸ್ಥಳೀಯರು ಮಹಮ್ಮದ್ ಮನೆಗೆ ತೆರಳಿದ ಬಳಿಕ ಅಂಗಡಿಯೊಳಗಿನ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಪ್ಯ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am