ಬ್ರೇಕಿಂಗ್ ನ್ಯೂಸ್
07-09-20 06:26 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 7: ಅಂಗಡಿ ಮಾಲಕ ತಾನು ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ತಾನೇ ಬೆಂಕಿ ಹಚ್ಚಿ ಭಸ್ಮ ಮಾಡಿದ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರು ಸಮೀಪ ನಡೆದಿದೆ. ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದ್ದು ಈ ಘಟನೆ ಸ್ಥಳೀಯರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಅಂಗಡಿ ಮಾಲಿಕ ತನ್ನ ಅಂಗಡಿಗೆ ತಾನೇ ಬೆಂಕಿ ಇಟ್ಟಿದೇಕೆ ಎಂಬುದು ಮಾತ್ರ ನಿಗೂಢವಾಗಿದೆ.
ಮಾವಿನಕಟ್ಟೆ ನಿವಾಸಿ ಮಹಮ್ಮದ್ ಎಂಬವರು ಕಳೆದ 4 ವರ್ಷಗಳಿಂದ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಲಾಕ್ಡೌನ್ ಬಳಿಕ ಕಳೆದ ಎರಡು ತಿಂಗಳಿನಿಂದ ಅಂಗಡಿಯಲ್ಲಿ ವ್ಯಾಪಾರ ಆರಂಭಿಸಿದ್ದರು. ಅಂಗಡಿಯಲ್ಲಿ ಸ್ಟೇಶನರಿ ಸಾಮಾಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಕೂಡಾ ಅದರೊಳಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್ರವರು ಅಂಗಡಿ ಬಾಗಿಲು ತೆರೆದಿದ್ದರು. ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಂಗಡಿಯೊಳಗೆ ಬೆಂಕಿ ಹಾಕುತ್ತಿರುವ ದೃಶ್ಯವನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದು ಆ ವೇಳೆ ಬೆಂಕಿ ನಂದಿಸದಂತೆ ಮಾಲಕ ಮಹಮ್ಮದ್ ತಡೆದಿದ್ದಾರೆ ಎಂದು ಹೇಳಲಾಗಿದೆ.
ತನ್ನ ಅಂಗಡಿಗೆ ಬೆಂಕಿ ಇಟ್ಟ ಮಹಮ್ಮದ್ ನಂತರ ತನ್ನ ಮನೆಯತ್ತ ತೆರಳಿದ್ದಾರೆ. ಆದರೆ ಸ್ಥಳೀಯರು ಮಹಮ್ಮದ್ ಮನೆಗೆ ತೆರಳಿದ ಬಳಿಕ ಅಂಗಡಿಯೊಳಗಿನ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಪ್ಯ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:02 pm
Mangalore Correspondent
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm