ಬ್ರೇಕಿಂಗ್ ನ್ಯೂಸ್
05-09-21 05:36 pm Mangaluru Correspondent ಕರಾವಳಿ
ಮಂಗಳೂರು, ಸೆ.5 : ಆಗೋ ವರೆಗೆ ಇದ್ದವರು ಆರೋ ತನಕ ಇರಬಾರದೇ ? ಪಾಯಸ ಆಗೋಗಿದೆ, ಅದನ್ನು ಬಿಸಿ ಬಿಸಿ ಇರುವಾಗಲೇ ತಿಂದ್ಬಿಟ್ಟು ಬಾಯಿ ಸುಟ್ಟುಕೊಳ್ಳೋದು ಯಾಕೆ ? ಹೀಗೆಂದು ಗಾದೆ ಮಾತಿನ ಮೂಲಕ ದಕ್ಷಿಣ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ವೀಕೆಂಡ್ ಕರ್ಫ್ಯೂ ಬಗ್ಗೆ ಪ್ರಶ್ನಿಸಿ ಕರೆ ಮಾಡಿದ ವ್ಯಕ್ತಿಗೆ ಸಮಾಧಾನ ಚಿತ್ತದಿಂದ ಉತ್ತರಿಸಿದ ಆಡಿಯೋ ಈಗ ವೈರಲ್ ಆಗಿದೆ.
ರೆಡಿಮೇಡ್ ಬಟ್ಟೆ, ಫ್ಯಾನ್ಸಿ, ಚಪ್ಪಲಿ ಮಾರಾಟದ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಂತೋಷ್ ಕಾಮತ್ ಅನ್ನುವವರು ವೀಕೆಂಡ್ ಕರ್ಫ್ಯೂ ಬಗ್ಗೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದು, ನಮ್ಮ ವ್ಯಾಪಾರಸ್ಥರು ಅಂಗಡಿ ತೆರೆದಿಡಲು ನೀವು ಅವಕಾಶ ಕೊಡಬೇಕು. ಯಾವುದೇ ರೀತಿಯಲ್ಲಿ ಜನ ಸೇರದಂತೆ ನಾವು ನೋಡಿಕೊಳ್ಳುತ್ತೇವೆ. ಜನ ಸೇರಿದರೆ ಏಕ್ಷನ್ ತಗೊಳ್ಳಿ ಎಂದು ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ರಾಜೇಂದ್ರ ಜಿಲ್ಲೆಯ ವಾಸ್ತವ ಸ್ಥಿತಿಯನ್ನು ಮನದಟ್ಟು ಮಾಡಿದ್ದಾರೆ.
ಈ ಕೊರೊನಾ ನಿರ್ವಹಣೆಯಿಂದ ನಮಗೂ ಸಾಕಾಗಿ ಹೋಗಿದೆ. ನಮ್ಗೂ ವೀಕೆಂಡ್ ಲಾಕ್ಡೌನ್ ಮಾಡಬೇಕು, ನಿಮಗೆ ಕಷ್ಟ ಕೊಡಬೇಕು ಅಂತೇನಿಲ್ಲ. ಆದರೆ, ಈ ವಾರ ಕೊರೊನಾ ಪಾಸಿಟಿವ್ ರೇಟ್ 2.04 ಇದೆ. ಮುಂದಿನ ವಾರಕ್ಕೆ ಖಂಡಿತವಾಗ್ಯೂ ಈ ದರ 2.0 ಒಳಗೆ ಬರುತ್ತದೆ. ಈ ಬಗ್ಗೆ ಜನಪ್ರತಿನಿಧಿಗಳು ಕೂಡ ವೀಕೆಂಡ್ ಕರ್ಫ್ಯೂ ತೆಗೆಯಬೇಕೆಂದು ಹೇಳುತ್ತಿದ್ದಾರೆ. ಆದರೆ, ನಾವು ರಾಜ್ಯ ಸರಕಾರದ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ.
ನೀವು ಅಂಗಡಿ ತೆರೆದಲ್ಲಿ ನಾವು ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಟ್ರೇಡ್ ಲೈಸನ್ಸ್ ರದ್ದು ಮಾಡುವುದು, ಕೇಸ್ ಮಾಡುವುದು, ಆಮೇಲೆ ಕೋರ್ಟ್ ಅಲೆದಾಡುವುದು ಎಲ್ಲ ನಿಮಗೆ ಬಿಟ್ಟಿದ್ದು. ಇಷ್ಟು ದಿನದ ವರೆಗೂ ಕಾದಿರಿ. ಈ ಬಾರಿ ಒಂದು ದಿನಕ್ಕೆ ಕಾದುಬಿಡಿ. ಡೆಫಿನಿಟ್ ಆಗಿ ಹೇಳ್ತೀನಿ. ಮುಂದಿನ ವಾರಕ್ಕೆ ವೀಕೆಂಡ್ ಲಾಕ್ಡೌನ್ ತೆರವಾಗುವ ವಿಶ್ವಾಸ ಇದೆ. ಜನಪ್ರತಿನಿಧಿಗಳ ಒತ್ತಾಯಕ್ಕೆ ನಾನೂ ರೆಕಮೆಂಡ್ ಮಾಡ್ತೀನಿ. ಪಾಸಿಟಿವ್ ರೇಟ್ 2ರ ಒಳಗೆ ಬಂದಲ್ಲಿ ವೀಕೆಂಡ್ ತೆರವಾಗಲಿದೆ ಎಂದು ಜಿಲ್ಲಾಧಿಕಾರಿ ಮನವರಿಕೆ ಮಾಡಿದ್ದಾರೆ. ಜಿಲ್ಲಾಧಿಕಾರಿ ಜೊತೆಗಿನ ಸಂಭಾಷಣೆಯ ಆಡಿಯೋವನ್ನು ಸಂತೋಷ್ ಕಾಮತ್ ತಮ್ಮ ಗ್ರೂಪಿನಲ್ಲಿ ಹಾಕಿದ್ದು, ಪಾಯಸದ ಉದಾಹರಣೆ ಕೊಟ್ಟಿದ್ದು ಜನರ ಆಕರ್ಷಣೆಗೆ ಕಾರಣವಾಗಿದೆ.
Mangalore Dc Dr Rajendra Kumar call record goes viral on social media about Weekend curfew in Mangalore while speaking to a person who was asking to remove the Weekend curfew.
06-03-26 12:08 pm
HK News Staffer
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
06-03-26 11:40 am
HK News Staffer
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
06-03-26 12:17 pm
supritha Jain
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm