ಬ್ರೇಕಿಂಗ್ ನ್ಯೂಸ್
06-09-21 01:50 pm Udupi Correspondent ಕರಾವಳಿ
ಉಡುಪಿ, ಸೆ.6 : ಬ್ಯಾಂಕಿನಲ್ಲಿ ಭದ್ರವಾಗಿರಲಿ ಅಂತ ಇಟ್ಟಿದ್ದ ಫಿಕ್ಸೆಡ್ ಡೆಪಾಸಿಟ್ ಹಣವೇ ಕಾಣೆಯಾಗಿದ್ದು ಆನಂತರ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸಿದ ವ್ಯಕ್ತಿಗೆ ಗ್ರಾಹಕರ ನ್ಯಾಯಾಲಯದಲ್ಲಿ ಗೆಲುವು ಸಿಕ್ಕಿದೆ.
ಕುಂದಾಪುರದ ಉಪ್ಪೂರು ನಿವಾಸಿ ಹರೀಶ್ ಗುಡಿಗಾರ್ ಹಣ ಕಳೆದುಕೊಂಡವರು. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದಾಗ ಮಲ್ಲೇಶ್ವರಂನ ಸ್ಟೇಟ್ ಬ್ಯಾಂಕಿನಲ್ಲಿ ಸೇವಿಂಗ್ಸ್ ಬ್ಯಾಂಕ್ ಖಾತೆ ಹೊಂದಿದ್ದರು. ಊರಿನಲ್ಲಿ ಸ್ವಂತದೊಂದು ಮನೆ ನಿರ್ಮಿಸಬೇಕೆಂದು ಅಕೌಂಟ್ನಲ್ಲಿ ಹಣ ಕೂಡಿಟ್ಟಿದ್ದರು. ಬೆಂಗಳೂರು ತೊರೆದ ಬಳಿಕ 2019ರಲ್ಲಿ ಉಡುಪಿಯ ಸಂತೆಕಟ್ಟೆಯ ಎಸ್ಬಿಐ ಬ್ರಾಂಚಿಗೆ ತಮ್ಮ ಖಾತೆಯನ್ನು ವರ್ಗಾವಣೆ ಮಾಡಿದ್ದರು. ತನ್ನ ದುಡಿಮೆಯ ಐದೂವರೆ ಲಕ್ಷ ರೂ.ವನ್ನು ಹರೀಶ್ ಫಿಕ್ಸೆಡ್ ಡಿಪಾಸಿಟ್ ಆಗಿ ಇಟ್ಟಿದ್ದರು.


ಈ ನಡುವೆ, 2019 ಆಗಸ್ಟ್ 23 ರಂದು ಮೊಬೈಲ್ಗೆ ಬಂದ ಮೆಸೇಜ್ ಗಮನಿಸಿ ಬ್ಯಾಂಕಿಗೆ ತೆರಳಿ ನೋಡಿದಾಗ, ಫಿಕ್ಸೆಡ್ ಡೆಪಾಸಿಟ್ನಲ್ಲಿದ್ದ ಹಣವೇ ಮಂಗ ಮಾಯವಾಗಿತ್ತು. ಅದರಲ್ಲಿ, ರೂ. 6360 ಮಾತ್ರ ಉಳಿದಿತ್ತು. ಹಣ ಕಳೆದುಕೊಂಡ ಹರೀಶ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದರೂ, ಯಾವುದೇ ಪ್ರಯೋಜನ ಆಗಲಿಲ್ಲ. ಎರಡು ವರ್ಷ ಹಣ ಕಳೆದುಕೊಂಡು ಓದ್ದಾಡಿದ ಹರೀಶ್, ಬಳಿಕ ಗ್ರಾಹಕರ ನ್ಯಾಯಾಲಯಕ್ಕೆ ಹೋಗಿದ್ದಾರೆ.
ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಬಾಗ್ ಬಳಿ ತಮ್ಮ ಅಳಲನ್ನು ತೋಡಿಕೊಂಡು ಗ್ರಾಹಕ ನ್ಯಾಯಾಲಯದ ಕದ ತಟ್ಟಿದರು. ಎಲ್ಲ ತನಿಖೆ ನಡೆದ ಬಳಿಕ ಹರೀಶ್ ಪರವಾಗಿ ತೀರ್ಪು ಬಂದಿತ್ತು. ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ಅಂದ್ರೆ, ಐದೂವರೆ ಲಕ್ಷಕ್ಕೆ 10% ಬಡ್ಡಿ ನೀಡಬೇಕು, ಜೊತೆಗೆ 50 ಸಾವಿರ ಪರಿಹಾರ, ಕೋರ್ಟ್ ವೆಚ್ಚ ಎಂದು ಹೆಚ್ಚುವರಿ 10 ಸಾವಿರ ರೂ. ಮೂವತ್ತು ದಿನಗಳ ಒಳಗೆ ನೀಡಬೇಕು ಅಂತ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.
In public sector bank SBI lacs of fixed deposit is wrong doing customer court given,
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm