ಬ್ರೇಕಿಂಗ್ ನ್ಯೂಸ್
06-09-21 01:50 pm Udupi Correspondent ಕರಾವಳಿ
ಉಡುಪಿ, ಸೆ.6 : ಬ್ಯಾಂಕಿನಲ್ಲಿ ಭದ್ರವಾಗಿರಲಿ ಅಂತ ಇಟ್ಟಿದ್ದ ಫಿಕ್ಸೆಡ್ ಡೆಪಾಸಿಟ್ ಹಣವೇ ಕಾಣೆಯಾಗಿದ್ದು ಆನಂತರ ನ್ಯಾಯಕ್ಕಾಗಿ ಕಾನೂನು ಹೋರಾಟ ನಡೆಸಿದ ವ್ಯಕ್ತಿಗೆ ಗ್ರಾಹಕರ ನ್ಯಾಯಾಲಯದಲ್ಲಿ ಗೆಲುವು ಸಿಕ್ಕಿದೆ.
ಕುಂದಾಪುರದ ಉಪ್ಪೂರು ನಿವಾಸಿ ಹರೀಶ್ ಗುಡಿಗಾರ್ ಹಣ ಕಳೆದುಕೊಂಡವರು. ಬೆಂಗಳೂರಿನಲ್ಲಿ ನೌಕರಿ ಮಾಡುತ್ತಿದ್ದಾಗ ಮಲ್ಲೇಶ್ವರಂನ ಸ್ಟೇಟ್ ಬ್ಯಾಂಕಿನಲ್ಲಿ ಸೇವಿಂಗ್ಸ್ ಬ್ಯಾಂಕ್ ಖಾತೆ ಹೊಂದಿದ್ದರು. ಊರಿನಲ್ಲಿ ಸ್ವಂತದೊಂದು ಮನೆ ನಿರ್ಮಿಸಬೇಕೆಂದು ಅಕೌಂಟ್ನಲ್ಲಿ ಹಣ ಕೂಡಿಟ್ಟಿದ್ದರು. ಬೆಂಗಳೂರು ತೊರೆದ ಬಳಿಕ 2019ರಲ್ಲಿ ಉಡುಪಿಯ ಸಂತೆಕಟ್ಟೆಯ ಎಸ್ಬಿಐ ಬ್ರಾಂಚಿಗೆ ತಮ್ಮ ಖಾತೆಯನ್ನು ವರ್ಗಾವಣೆ ಮಾಡಿದ್ದರು. ತನ್ನ ದುಡಿಮೆಯ ಐದೂವರೆ ಲಕ್ಷ ರೂ.ವನ್ನು ಹರೀಶ್ ಫಿಕ್ಸೆಡ್ ಡಿಪಾಸಿಟ್ ಆಗಿ ಇಟ್ಟಿದ್ದರು.


ಈ ನಡುವೆ, 2019 ಆಗಸ್ಟ್ 23 ರಂದು ಮೊಬೈಲ್ಗೆ ಬಂದ ಮೆಸೇಜ್ ಗಮನಿಸಿ ಬ್ಯಾಂಕಿಗೆ ತೆರಳಿ ನೋಡಿದಾಗ, ಫಿಕ್ಸೆಡ್ ಡೆಪಾಸಿಟ್ನಲ್ಲಿದ್ದ ಹಣವೇ ಮಂಗ ಮಾಯವಾಗಿತ್ತು. ಅದರಲ್ಲಿ, ರೂ. 6360 ಮಾತ್ರ ಉಳಿದಿತ್ತು. ಹಣ ಕಳೆದುಕೊಂಡ ಹರೀಶ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದರೂ, ಯಾವುದೇ ಪ್ರಯೋಜನ ಆಗಲಿಲ್ಲ. ಎರಡು ವರ್ಷ ಹಣ ಕಳೆದುಕೊಂಡು ಓದ್ದಾಡಿದ ಹರೀಶ್, ಬಳಿಕ ಗ್ರಾಹಕರ ನ್ಯಾಯಾಲಯಕ್ಕೆ ಹೋಗಿದ್ದಾರೆ.
ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ರವೀಂದ್ರನಾಥ್ ಶಾನುಬಾಗ್ ಬಳಿ ತಮ್ಮ ಅಳಲನ್ನು ತೋಡಿಕೊಂಡು ಗ್ರಾಹಕ ನ್ಯಾಯಾಲಯದ ಕದ ತಟ್ಟಿದರು. ಎಲ್ಲ ತನಿಖೆ ನಡೆದ ಬಳಿಕ ಹರೀಶ್ ಪರವಾಗಿ ತೀರ್ಪು ಬಂದಿತ್ತು. ಕಳೆದುಕೊಂಡ ಹಣವನ್ನು ಬಡ್ಡಿ ಸಮೇತ ಅಂದ್ರೆ, ಐದೂವರೆ ಲಕ್ಷಕ್ಕೆ 10% ಬಡ್ಡಿ ನೀಡಬೇಕು, ಜೊತೆಗೆ 50 ಸಾವಿರ ಪರಿಹಾರ, ಕೋರ್ಟ್ ವೆಚ್ಚ ಎಂದು ಹೆಚ್ಚುವರಿ 10 ಸಾವಿರ ರೂ. ಮೂವತ್ತು ದಿನಗಳ ಒಳಗೆ ನೀಡಬೇಕು ಅಂತ ಗ್ರಾಹಕರ ನ್ಯಾಯಾಲಯ ತೀರ್ಪು ನೀಡಿದೆ.
In public sector bank SBI lacs of fixed deposit is wrong doing customer court given,
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm