ಬ್ರೇಕಿಂಗ್ ನ್ಯೂಸ್
01-08-20 02:23 pm Mangalore Reporter ಕರಾವಳಿ
ಮಂಗಳೂರು: ವಿದಾನಪರಷತ್ನ ಮಾಜಿ ಸದಸ್ಯ ಐವನ್ ಡಿ’ಸೋಜ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನೆನ್ನೆಯಷ್ಟೇ ಡಿಕೆಶಿ ಜೊತೆ ಹಲವೆಡೆ ಇವರು ತಿರುಗಾಡಿದ್ದರಿಂದ ಜೊತೆಗಿದ್ದವರು ಮತ್ತು ಅವರು ಭೇಟಿ ನೀಡಿರುವ ಮನೆಗಳಲ್ಲಿ ಆತಂಕ ಆವರಿಸಿದೆ.
ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನ, ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಬಿಷಪ್ ಹೌಸ್, ಬೇಕಲ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಅವರ ಮನೆಗೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲೇ ಐವನ್ ಡಿ’ಸೋಜ ಜೊತೆಗಿದ್ದರು. ಅಲ್ಲದೆ ಭಾರೀ ಸಂಖ್ಯೆಯ ಅಭಿಮಾನಿಗಳು ಡಿಕೆಶಿ ಜೊತೆಗಿದ್ದರು. ಶಾಸಕ ಖಾದರ್, ಹರೀಶ್ ಕುಮಾರ್, ರಮಾನಾಥ ರೈ, ಜೆ.ಆರ್.ಲೋಬೋ ಹೀಗೆ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಇದಾದ ಮರುದಿನವೇ ತನಗೆ ಕೊರೊನಾ ಪಾಸಿಟಿವ್ ಬಂದಿದ್ದು, ನೀವೆಲ್ಲರೂ ಪ್ರಾರ್ಥಿಸಿ ಎಂದು ಐವನ್ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ, ಅವರ ಜೊತೆಗಿದ್ದವರು, ಅವರು ಭೇಟಿ ನೀಡಿರುವ ಮನೆಯವರಲ್ಲೂ ಆತಂಕ ಆವರಿಸಿದೆ.
ನಿನ್ನೆ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಸುದ್ದಿಗೋಷ್ಟಿ ನಡೆದಿತ್ತು. ಸುದ್ದಿಗೋಷ್ಟಿಯಲ್ಲಿ ಐವನ್ ಡಿಸೋಜ, ಮಾಜಿ ಸಚುವರಾದ ಯು.ಟಿ.ಖಾದರ್, ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಿಥುನ್ ರೈ ವೇದಿಕೆ ಹಂಚಿಕೊಂಡಿದ್ದರು. ಎಸಿ ಕೊಠಡಿಯಲ್ಲಿ ಸುದ್ದಿಗೋಷ್ಟಿ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರೆಲ್ಲ ಈಗ ಕ್ವಾರಂಟೈನ್ ಆಗಬೇಕಾಗಿದೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm