ಬ್ರೇಕಿಂಗ್ ನ್ಯೂಸ್
01-08-20 02:23 pm Mangalore Reporter ಕರಾವಳಿ
ಮಂಗಳೂರು: ವಿದಾನಪರಷತ್ನ ಮಾಜಿ ಸದಸ್ಯ ಐವನ್ ಡಿ’ಸೋಜ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ನೆನ್ನೆಯಷ್ಟೇ ಡಿಕೆಶಿ ಜೊತೆ ಹಲವೆಡೆ ಇವರು ತಿರುಗಾಡಿದ್ದರಿಂದ ಜೊತೆಗಿದ್ದವರು ಮತ್ತು ಅವರು ಭೇಟಿ ನೀಡಿರುವ ಮನೆಗಳಲ್ಲಿ ಆತಂಕ ಆವರಿಸಿದೆ.
ಮೊನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಂಗಳೂರಿಗೆ ಭೇಟಿ ನೀಡಿದ್ದು, ಕುದ್ರೋಳಿ ಗೋಕರ್ಣಾಥೇಶ್ವರ ದೇವಸ್ಥಾನ, ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ, ಬಿಷಪ್ ಹೌಸ್, ಬೇಕಲ ಖಾಝಿ ಇಬ್ರಾಹಿಂ ಮುಸ್ಲಿಯಾರ್ ಅವರ ಮನೆಗೂ ಭೇಟಿ ನೀಡಿದ್ದರು. ಈ ಸಂದರ್ಭದಲ್ಲೇ ಐವನ್ ಡಿ’ಸೋಜ ಜೊತೆಗಿದ್ದರು. ಅಲ್ಲದೆ ಭಾರೀ ಸಂಖ್ಯೆಯ ಅಭಿಮಾನಿಗಳು ಡಿಕೆಶಿ ಜೊತೆಗಿದ್ದರು. ಶಾಸಕ ಖಾದರ್, ಹರೀಶ್ ಕುಮಾರ್, ರಮಾನಾಥ ರೈ, ಜೆ.ಆರ್.ಲೋಬೋ ಹೀಗೆ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು. ಇದಾದ ಮರುದಿನವೇ ತನಗೆ ಕೊರೊನಾ ಪಾಸಿಟಿವ್ ಬಂದಿದ್ದು, ನೀವೆಲ್ಲರೂ ಪ್ರಾರ್ಥಿಸಿ ಎಂದು ಐವನ್ ಟ್ವೀಟ್ ಮಾಡಿದ್ದಾರೆ. ಇದರಿಂದಾಗಿ ಕಾಂಗ್ರೆಸ್ ಮುಖಂಡರು ಮಾತ್ರವಲ್ಲದೆ, ಅವರ ಜೊತೆಗಿದ್ದವರು, ಅವರು ಭೇಟಿ ನೀಡಿರುವ ಮನೆಯವರಲ್ಲೂ ಆತಂಕ ಆವರಿಸಿದೆ.
ನಿನ್ನೆ ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಡಿಕೆಶಿ ಸುದ್ದಿಗೋಷ್ಟಿ ನಡೆದಿತ್ತು. ಸುದ್ದಿಗೋಷ್ಟಿಯಲ್ಲಿ ಐವನ್ ಡಿಸೋಜ, ಮಾಜಿ ಸಚುವರಾದ ಯು.ಟಿ.ಖಾದರ್, ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಿಥುನ್ ರೈ ವೇದಿಕೆ ಹಂಚಿಕೊಂಡಿದ್ದರು. ಎಸಿ ಕೊಠಡಿಯಲ್ಲಿ ಸುದ್ದಿಗೋಷ್ಟಿ ನಡೆದಿದ್ದರಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರೆಲ್ಲ ಈಗ ಕ್ವಾರಂಟೈನ್ ಆಗಬೇಕಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm