ಬ್ರೇಕಿಂಗ್ ನ್ಯೂಸ್
08-09-20 12:34 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 8: ಸಮುದ್ರ ಮಧ್ಯೆ ಕಾಣೆಯಾದರೆ ಯಾರಾದ್ರೂ ಬದುಕು ಬರೋದುಂಟೇ..? ಆದರೆ ಇಲ್ಲೂಬ್ಬ ಮೀನು ಕಾರ್ಮಿಕ ಸಮುದ್ರ ಮಧ್ಯೆ ಪರ್ಸೀನ್ ಬೋಟ್ ನಿಂದ ಮಿಸ್ಸಿಂಗ್ ಆಗಿದ್ದರೂ ಎರಡು ದಿನಗಳ ನಂತರ ಪವಾಡ ಸದೃಶ ಬದುಕಿ ಬಂದಿದ್ದಾನೆ. ಹೌದು.. ಆಯುಷ್ಯ ಇದ್ದರೆ ಸಮುದ್ರಕ್ಕೆ ಬಿದ್ದರೂ ಬದುಕಿ ಬರಬಹುದು ಎನ್ನುವ ಮಾತು ಬಂದಿದ್ದು ಇದಕ್ಕೇ ಇರಬೇಕು.
ಮಂಗಳೂರಿನ ಹಳೆ ಬಂದರಿನಿಂದ ತೆರಳಿದ್ದ ಫಾಲ್ಕನ್ ಹೆಸರಿನ ಪರ್ಸೀನ್ ಬೋಟ್ ಎರಡು ದಿನಗಳ ಹಿಂದೆ ಸಮುದ್ರ ಮಧ್ಯೆ ಮೀನಿಗೆ ಬಲೆ ಹಾಕುವ ಯತ್ನದಲ್ಲಿತ್ತು. ಈ ವೇಳೆ, ಪರ್ಸೀನ್ ಬೋಟಿನ ಜೊತೆಗಿರುವ ಡಿಂಗಿ ಹೆಸರಿನ ಸಣ್ಣ ಬೋಟಿನಲ್ಲಿ ಕುಳಿತು ಕಾರ್ಮಿಕ ಸುನಿಲ್ ಡಿಸೋಜ ಬಲೆ ವಿಸ್ತರಿಸಲೆಂದು ನೀರಿಗೆ ಇಳಿದಿದ್ದರು. ಆದರೆ ಈ ವೇಳೆ ಜೋರಾಗಿ ಗಾಳಿ ಬಂದಿದ್ದರಿಂದ ಡಿಂಗಿ ಬೋಟಿಗೆ ಕಟ್ಟಿದ್ದ ಹಗ್ಗ ಕಡಿದು ಹೋಗಿದೆ. ಡಿಂಗಿ ಬೋಟ್ ಕಾರ್ಮಿಕನ ಸಹಿತ ಗಾಳಿಯೊಂದಿಗೆ ತೇಲಿ ಹೋಗಿದ್ದು, ಪರ್ಸೀನ್ ಬೋಟಿನಿಂದ ಮಿಸ್ ಆಗಿತ್ತು. ಪರ್ಸೀನ್ ಬೋಟಿನಲ್ಲಿದ್ದ ಸಿಬಂದಿ ಸಮುದ್ರ ಮಧ್ಯೆ ಹುಡುಕಾಟ ನಡೆಸಿದ್ರೂ ಡಿಂಗಿ ಆಗಲೀ, ಅದರಲ್ಲಿದ್ದ ಕಾರ್ಮಿಕನಾಗಲೀ ಪತ್ತೆಯಾಗಿರಲಿಲ್ಲ. ಆನಂತ್ರ ಪರ್ಸೀನ್ ಬೋಟ್ ಮಂಗಳೂರು ಬಂದರಿಗೆ ಹಿಂತಿರುಗಿ ಬಂದಿತ್ತು.

ಎರಡು ದಿನಗಳ ಬಳಿಕ ಉಡುಪಿ ಜಿಲ್ಲೆಯ ಮಲ್ಪೆಯ ಟ್ರಾಲ್ ಬೋಟಿನವರು ಆಳಸಮುದ್ರ ಮೀನುಗಾರಿಕೆಯಿಂದ ಹಿಂತಿರುಗುತ್ತಿದ್ದಾಗ ಸಮುದ್ರ ಮಧ್ಯದಲ್ಲಿ ಪತ್ತೆಯಾದ ಡಿಂಗಿಯನ್ನು ಗಮನಿಸಿದ್ದು ಅದರಲ್ಲಿದ್ದ ಕಾರ್ಮಿಕನನ್ನು ರಕ್ಷಣೆ ಮಾಡಿದ್ದಾರೆ. ಗಾಳಿ ಬಂದ ದಿಕ್ಕಿನಲ್ಲಿ ಸಮುದ್ರ ಮಧ್ಯೆ ಚಲಿಸುತ್ತಾ ಹೋಗುತ್ತಿದ್ದ ಡಿಂಗಿ ಬೋಟಿನಲ್ಲಿ ಅನ್ನ, ನೀರು ಇಲ್ಲದೆ ಎರಡು ದಿನ ಕಳೆದ ಕಾರ್ಮಿಕನನ್ನು ಹಿಡಿದು ಮಲ್ಪೆ ಬಂದರಿಗೆ ಕರೆತಂದಿದ್ದಾರೆ. ಕಾರ್ಮಿಕ ಸುನಿಲ್ ಡಿಸೋಜನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ಎರಡು ದಿನ ಕಳೆದಿದ್ದರಿಂದ ಸುನಿಲ್ ಜೀವಂತ ಬರುವುದು ಸಂಶಯ ಆಗಿತ್ತು. ಡಿಂಗಿ ಬೋಟ್ ಸಮುದ್ರ ಮಧ್ಯೆ ಮುಳುಗಿರಬಹುದು ಎಂದು ಅಂದಾಜು ಮಾಡಲಾಗಿತ್ತು. ಆದರೆ, ಸುನಿಲ್ ಡಿಸೋಜ ಪವಾಡ ಸದೃಶ ಬದುಕಿ ಬಂದಿದ್ದಾರೆ.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 01:36 pm
HK News Desk
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm