ಬ್ರೇಕಿಂಗ್ ನ್ಯೂಸ್
08-09-20 05:20 pm Mangalore Reporter ಕರಾವಳಿ
ಕಾಸರಗೋಡು, ಸೆಪ್ಟೆಂಬರ್ 8: ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ಹಾಗೂ ಟಿಕೆ ಪೂಕೊಯಾ ತಂಗಲ್ ಎಂಬುವರ ಮನೆ ಮೇಲೆ ಸ್ಥಳೀಯ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿದ್ದಾರೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಶಾಸಕ ಕಮರುದ್ದೀನ್ ವಿರುದ್ಧ ಆರ್ಥಿಕ ಅವ್ಯವಹಾರದ ಆರೋಪ ಕೇಳಿ ಬಂದಿತ್ತು. ಚಿನ್ನದ ಮೇಲಿನ ಹೂಡಿಕೆಗೆ ಸಂಬಂಧಿಸಿದ ವ್ಯಾಪಾರದಲ್ಲಿ ಭಾರಿ ವಂಚನೆಯಾಗಿದ್ದು, ಹಲವಾರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ಹಾಗೂ ಟಿಕೆ ಪೂಕೊಯಾ ತಂಗಲ್ ಇಬ್ಬರು ನಡೆಸುತ್ತಿದ್ದ ಚಿನ್ನದ ಮೇಲಿನ ಹೂಡಿಕೆ ವ್ಯವಹಾರದಲ್ಲಿ ಸುಮಾರು 100 ಕೋಟಿ ರುಗೂ ಅಧಿಕ ವಂಚನೆಯಾಗಿದೆ ಎಂದು ಗ್ರಾಹಕರ ದೂರುಗಳನ್ನು ಆಧಾರಿಸಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಫ್ಯಾಷನ್ ಗೋಲ್ಡ್ ಇಂಟರ್ ನ್ಯಾಷನಲ್ ಎಂಬ ಹೆಸರಿನ ಚಿನ್ನಾಭರಣ ವ್ಯವಹಾರ ನಡೆಸುತ್ತಿದ್ದರು. ಕಮರುದ್ದೀನ್ ಚೇರ್ಮನ್ ಆಗಿದ್ದರೆ, ಪೂಕೊಯಾ ತಂಗಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ ಎಂದು ಎಸ್ ಎಚ್ ಒ ಪಿ ನಾರಾಯಣನ್ ಹೇಳಿದ್ದಾರೆ.
ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಕಾಸರಗೋಡು, ಚಂಡೆರಾ ಸೇರಿದಂತೆ ವಿವಿಧ ಠಾಣೆಗಳಲ್ಲಿ 12ಕ್ಕೂ ಅಧಿಕ ದೂರುಗಳನ್ನು ಕ್ರೈಂ ಬ್ರ್ಯಾಂಚ್ ಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಕಮರುದ್ದೀನ್, ಇದು ರಾಜಕೀಯ ಷಡ್ಯಂತ್ರ, ಗ್ರಾಹಕರಿಗೆ ಹಣ ಹಿಂತಿರುಗಿಸಲು ನಾವು ಬದ್ಧವಾಗಿದ್ದೇವೆ ಎಂದಿದ್ದಾರೆ. ಕರ್ನಾಟಕಕ್ಕೆ ತಾಗಿಕೊಂಡಿರುವ ಕ್ಷೇತ್ರವೂ ಆಗಿರುವ ಮಂಜೇಶ್ವರದಲ್ಲಿ ಶಾಸಕರಾಗಿದ್ದ ಪಿ. ಬಿ ಅಬ್ದುಲ್ ರಝಾಕ್ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಸೋಲಿಸಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಕಮರುದ್ದೀನ್ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಕೇರಳ ವಿಧಾನಸಭೆಯಲ್ಲಿ ಕನ್ನಡ ಭಾಷೆಯಲ್ಲಿ ಶಾಸಕ ಪ್ರಮಾಣವಚನ ಸ್ವೀಕರಿಸಿ ಸುದ್ದಿಯಾಗಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm